ರವಿಶಂಕರ್ ಪ್ರಸಾದ್ 
ದೇಶ

ಜನಪ್ರಿಯ ವ್ಯಕ್ತಿಗಳ ಅಂಚೆ ಚೀಟಿ ಬಿಡುಗಡೆ: ಸರ್ಕಾರ

ದೇಶದ ಪ್ರಖ್ಯಾತ ಸಂಗೀತಗಾರರು, ಬರಹಗಾರರು, ಸ್ವಾತಂತ್ರ್ಯ ಹೋರಾಟಗಾರರು, ಚಿತ್ರಕಾರರ ಹೆಸರಿನಲ್ಲಿ ಸರಣಿ ಅಂಚೆಚೀಟಿಗಳನ್ನು...

ನವದೆಹಲಿ: ದೇಶದ ಪ್ರಖ್ಯಾತ ಸಂಗೀತಗಾರರು, ಬರಹಗಾರರು, ಸ್ವಾತಂತ್ರ್ಯ ಹೋರಾಟಗಾರರು, ಚಿತ್ರಕಾರರ ಹೆಸರಿನಲ್ಲಿ ಸರಣಿ ಅಂಚೆಚೀಟಿಗಳನ್ನು ಹೊರತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಅಂಚೆಚೀಟಿಗಳ ಸಂಗ್ರಹ ಸಲಹಾ ಸಮಿತಿ, ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಇದುವರೆಗೆ ಸರ್ಕಾರ ಸಾಂದರ್ಭಿಕ ಅಂಚೆಚೀಟಿಗಳನ್ನು ಮಾತ್ರ ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಪೋಸ್ಟ್ ಕಾರ್ಡ್ ಅಳತೆಯಲ್ಲಿ ದೇಶದ ಪ್ರಮುಖ ಪ್ರವಾಸಿ ತಾಣಗಳಾದ ತಾಜ್ ಮಹಲ್, ಅಜಂತಾ-ಎಲ್ಲೋರಾ, ಬೇಲೂರು ಮಠ, ಕಜುರಾಹೋಗಳ ಚಿತ್ರಗಳಿರುವ ಅಂಚೆ ಚೀಟಿಗಳನ್ನು ಸಹ ತರಲಿದೆ.ಅಂಚೆ ಚೀಟಿ ವಿನ್ಯಾಸ ಕಾರ್ಯವನ್ನು ಗುತ್ತಿಗೆ ನೀಡಲಿದೆ.

ಈ ವರ್ಷ ಜನವರಿ 15ರಂದು ಕ್ಲೀನ್ ಇಂಡಿಯಾ ಧ್ಯೇಯದಡಿ, ಸ್ವಚ್ಛ ಭಾರತ ಅಂಚೆ ಚೀಟಿಯನ್ನು ಅಂಚೆ ಇಲಾಖೆ ಬಿಡುಗಡೆ ಮಾಡಿತ್ತು. ಅದೇ ರೀತಿ ನಾಡಿದ್ದು, ಸ್ವತಂತ್ರ ದಿನಾಚರಣೆ ಅಂಗವಾಗಿ ಮಹಿಳಾ ಸಬಲೀಕರಣಕ್ಕೆ ಸಂಬಂಧಪಟ್ಟ ಅಂಚೆಚೀಟಿಯನ್ನು ಇಲಾಖೆ ಹೊರತರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT