ತಾಜ್ ಮಹಲ್ 
ದೇಶ

ತಾಜ್ ಮಹಲ್ ಮೂಲತಃ ಶಿವನ ದೇವಾಲಯವಾಗಿತ್ತು: ಆಗ್ರಾ ವಕೀಲರ ಸಂಘ

ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾಗಿರುವ ವಿಶ್ವ ಪ್ರಸಿದ್ದ ತಾಜ್ ಮಹಲ್ ಇರುವ ಜಾಗದಲ್ಲಿ ಶಿವನ ದೇವಾಲಯವಿತ್ತು....

ನವದೆಹಲಿ: ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾಗಿರುವ ವಿಶ್ವ ಪ್ರಸಿದ್ದ ತಾಜ್ ಮಹಲ್ ಇರುವ ಜಾಗದಲ್ಲಿ ಶಿವನ ದೇವಾಲಯವಿತ್ತು. ಹೀಗಾಗಿ ಜಾಗದ ಒಡೆತನ ಹಿಂದೂಗಳಿಗೆ ಸೇರಬೇಕೆಂದು ಎಂದು ಆಗ್ರಾ ವಕೀಲರ ಸಂಘ ಆಗ್ರಹಿಸಿದೆ.

17ನೇ ಶತಮಾನದಲ್ಲಿ ಮೊಗರಲ ಕಾಲದಲ್ಲಿ ಸ್ಥಾಪನೆಯಾಗಿರುವ ತಾಜ್ ಮಹಲ್ ಸ್ಮಾರಕದ ಜಾಗ ಒಡೆತನ ಹಿಂದೂಗಳಿಗೆ ಸೇರಬೇಕು ಎಂದು ಆರು ವಕೀಲರು ದೆಹಲಿಯ 14 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ.ಇನ್ನು ಈ ಸಂಬಂಧ ಪ್ರತಿಕ್ರಿಯೆ ನೀಡಲು ಆಗಸ್ಟ್ ವರೆಗೆ ಸಮಯ ನೀಡುವಂತೆ ಸಂಸ್ಕೃತಿ ಇಲಾಖೆ ಮನವಿ ಮಾಡಿದೆ.

ಇದಕ್ಕೂ ಮುಂಚೆ ಪ್ರಾಚ್ಯ ಸಂಶೋಧನಾ ಇಲಾಖೆ ತಾಜ್ ಮಹಲ್ ಜಾಗದಲ್ಲಿ ಈ ಹಿಂದೆ ಶಿವನ ದೇವಾಲಯವಿತ್ತು ಎಂಬ ಅಭಿಪ್ರಾಯವನ್ನು ತಳ್ಳಿ ಹಾಕಿದೆ. ಆದರೆ ಈ ಜಾಗದಲ್ಲಿ ಶಿವನ ದೇವಾಲಯವಿತ್ತು ಎಂಬುದಕ್ಕೆ ತಮ್ಮ ಬಳಿ ಸೂಕ್ತ ದಾಖಲೆಗಳಿವೆ ಎಂದು ಹೇಳಿರುವ ವಕೀಲರ ಸಂಘ ಇದು ಅಗ್ರೇಶ್ವರ್ ಮಹಾದೇವ್ ಎಂಬ ದೇವಸ್ಥಾನವಿತ್ತು. ಹೀಗಾಗಿ ಇದರ ಒಡೆತನದ ಹಕ್ಕು ಹಿಂದೂಗಳಿಗೆ ಸೇರಬೇಕು ಎಂದು ಒತ್ತಾಯಿಸಿದೆ.

ಇನ್ನು ಇದಕ್ಕೆಪೂರಕ ಎನ್ನುವಂತೆ ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ ಲಕ್ಷ್ಮಿಕಾಂತ್ ಬಾಜ್ಬಯಿ ತಾಜ್ ಮಹಲ್ ಪುರಾತನ ಹಿಂದೂ ದೇವಾಲಯದ ಒಂದು ಭಾಗವಾಗಿತ್ತು. ಮೊಗಲ್ ದೊರೆ ಷಹಜಹಾನ್ ರಾಜಾ ಜೈ ಸಿಂಗ್ ಎಂಬಾತನಿಂದ ತೇಜೋ ಮಹಾಲಯ ದೇವಾಲಯದ ಒಂದು ಭಾಗವನ್ನು ಖರೀದಿಸಿದ್ದ ಎಂದು ಹೇಳಿದ್ದರು.
.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT