ಜಯಲಲಿತಾ 
ದೇಶ

ಅನಾರೋಗ್ಯ ಹಿನ್ನೆಲೆ ಕಲಾಂ ಅಂತ್ಯಕ್ರಿಯೆಗೆ ಜಯಾ ಗೈರು

ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಅಂತ್ಯಕ್ರಿಯೆಯಲ್ಲಿ...

ಚೆನ್ನೈ: ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ. ಆದರೆ ಅವರ ಬದಲಾಗಿ ತಮ್ಮ ಸರ್ಕಾರದ ಏಳು ಸಚಿವರನ್ನು ಕಳುಹಿಸುತ್ತಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ತಮಿಳುನಾಡು ಸಿಎಂ, 'ಡಾ.ಕಲಾಂ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ನಾಳೆ ರಾಮೇಶ್ವರಂನಲ್ಲಿ ನಡೆಯುವ ಅವರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಬೇಕು ಎಂದುಕೊಂಡಿದ್ದೆ. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಯಾಣ ಮಾಡುವ ಸ್ಥಿತಿಯಲ್ಲಿಲ್ಲ' ಎಂದು ಹೇಳಿದ್ದಾರೆ.

ಕಲಾಂ ಸಾವು ತುಂಬಾ ನೋವುಂಟು ಮಾಡಿದೆ ಎಂದಿರುವ ಜಯಲಲಿತಾ, ಒಂದು ಬಡ ಕುಟುಂಬದಲ್ಲಿ ಹುಟ್ಟಿ, ಕಠಿಣ ಶ್ರಮದಿಂದ ದೊಡ್ಡ ವ್ಯಕ್ತಿಯಾಗಿ ಬೆಳೆದಿದ್ದಾರೆ. ಅವರ ಯುವಕರಿಗೆ ಸ್ಫೂರ್ತಿಯಾಗಿದ್ದರು ಎಂದು ಹೇಳಿದ್ದಾರೆ.

ತಮಿಳುನಾಡು ಸರ್ಕಾರದ ಪರವಾಗಿ ಹಿರಿಯ ಸಚಿವರಾದ ಓ ಪನ್ನೀರ್ ಸೆಲ್ವಂ, ಆರ್.ವಿಶ್ವನಾಥನ್, ಆರ್. ವೈಥಿಲಿಂಗಂ, ಕೆ.ಪಳನಿಸ್ವಾಮಿ, ಪಿ.ಪಳನಿಯಪ್ಪನ್, ಎಸ್.ಸುಂದರ್‌ರಾಜ್ ಹಾಗೂ ಆರ್‌ಬಿ ಉದಯಕುಮಾರ್ ಅವರು ಕಲಾಂ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿ, ಅಂತಿಮ ನಮನ ಸಲ್ಲಿಸಲಿದ್ದಾರೆ ಎಂದು ಜಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT