ಜಯಲಲಿತಾ 
ದೇಶ

ಅನಾರೋಗ್ಯ ಹಿನ್ನೆಲೆ ಕಲಾಂ ಅಂತ್ಯಕ್ರಿಯೆಗೆ ಜಯಾ ಗೈರು

ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಅಂತ್ಯಕ್ರಿಯೆಯಲ್ಲಿ...

ಚೆನ್ನೈ: ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ. ಆದರೆ ಅವರ ಬದಲಾಗಿ ತಮ್ಮ ಸರ್ಕಾರದ ಏಳು ಸಚಿವರನ್ನು ಕಳುಹಿಸುತ್ತಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ತಮಿಳುನಾಡು ಸಿಎಂ, 'ಡಾ.ಕಲಾಂ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ನಾಳೆ ರಾಮೇಶ್ವರಂನಲ್ಲಿ ನಡೆಯುವ ಅವರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಬೇಕು ಎಂದುಕೊಂಡಿದ್ದೆ. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಯಾಣ ಮಾಡುವ ಸ್ಥಿತಿಯಲ್ಲಿಲ್ಲ' ಎಂದು ಹೇಳಿದ್ದಾರೆ.

ಕಲಾಂ ಸಾವು ತುಂಬಾ ನೋವುಂಟು ಮಾಡಿದೆ ಎಂದಿರುವ ಜಯಲಲಿತಾ, ಒಂದು ಬಡ ಕುಟುಂಬದಲ್ಲಿ ಹುಟ್ಟಿ, ಕಠಿಣ ಶ್ರಮದಿಂದ ದೊಡ್ಡ ವ್ಯಕ್ತಿಯಾಗಿ ಬೆಳೆದಿದ್ದಾರೆ. ಅವರ ಯುವಕರಿಗೆ ಸ್ಫೂರ್ತಿಯಾಗಿದ್ದರು ಎಂದು ಹೇಳಿದ್ದಾರೆ.

ತಮಿಳುನಾಡು ಸರ್ಕಾರದ ಪರವಾಗಿ ಹಿರಿಯ ಸಚಿವರಾದ ಓ ಪನ್ನೀರ್ ಸೆಲ್ವಂ, ಆರ್.ವಿಶ್ವನಾಥನ್, ಆರ್. ವೈಥಿಲಿಂಗಂ, ಕೆ.ಪಳನಿಸ್ವಾಮಿ, ಪಿ.ಪಳನಿಯಪ್ಪನ್, ಎಸ್.ಸುಂದರ್‌ರಾಜ್ ಹಾಗೂ ಆರ್‌ಬಿ ಉದಯಕುಮಾರ್ ಅವರು ಕಲಾಂ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿ, ಅಂತಿಮ ನಮನ ಸಲ್ಲಿಸಲಿದ್ದಾರೆ ಎಂದು ಜಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT