ಪ್ರತಿಭಾ ಪಾಟೀಲ್ 
ದೇಶ

ಅನಗತ್ಯವಾಗಿ ಸುದ್ದಿಯಾಗುತ್ತಿರುವ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್

ಅಜ್ಜಿಗೆ ಅರಿವೆ ಚಿಂತೆ...ಮೊಮ್ಮಗಳಿಗೆ ಮದುವೆ ಚಿಂತೆ ಅನ್ನೋ ಆಗಿದೆ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ನಡೆ....

ನವದೆಹಲಿ: ಅಜ್ಜಿಗೆ ಅರಿವೆ ಚಿಂತೆ...ಮೊಮ್ಮಗಳಿಗೆ ಮದುವೆ ಚಿಂತೆ ಅನ್ನೋ ಆಗಿದೆ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ನಡೆ. ಹೌದು ಇಡೀ ದೇಶವೇ ಮಾಜಿ ರಾಷ್ಟ್ರಪತಿ ಹಾಗೂ ಮಕ್ಕಳ ಪ್ರೀತಿಯ ತಾತ ಡಾ. ಅಬ್ದುಲ್ ಕಲಾಂ ಅವರನ್ನು ಕಳೆದು ಕೊಂಡು ಶೋಕದಲ್ಲಿ ಮುಳುಗಿರುವಾಗ, ಇನ್ನೊಬ್ಬ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅನಗತ್ಯವಾಗಿ ಖ್ಯಾತೆ ತೆಗೆಯುತ್ತಿದ್ದಾರೆ.

ಮಾಧ್ಯಮಗಳ ವರದಿ ಪ್ರಕಾರ ಪ್ರತಿಭಾ ಪಾಟೀಲ್ ತಮ್ಮ ಪ್ರಯಾಣದ ಇಂಧನ ಭತ್ಯೆ ತುಂಬಿಕೊಡುವುದರ ಜೊತೆಗೆ ತಮಗೆ ಸರ್ಕಾರಿ ವಾಹನ ನೀಡುವುದು ಸೇರಿದಂತೆ ತಮ್ಮ ಖಾಸಗಿ ವಾಹನದಲ್ಲಿ ಸಂಚರಿಸಲು ಅನುವು ಮಾಡಿಕೊಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಸರ್ಕಾರದ ನಿಯಮದ ಪ್ರಕಾರ ಮಾಜಿ ರಾಷ್ಟ್ರಪತಿಯಾದವರಿಗೆ ಇಂಧನ ಭತ್ಯೆ ನೀಡಬಹುದು ಇಲ್ಲವೇ ಸರ್ಕಾರಿ ಕಾರು ಬಳಸಬಹುದಾಗಿದೆ. ಆದರೆ ಪ್ರತಿಭಾ ಪಾಟೀಲ್ ತಮ್ಮಸ್ವಂತ ವಾಹನ ಬಳಕೆ ಜೊತೆಗೆ ಸರ್ಕಾರಿ ವಾಹನ ಸೌಲಭ್ಯ ಒದಗಿಸುವಂತೆ ಕೇಳಿದ್ದಾರೆ. ಹಾಗೂ ಇಂಧನ ಭತ್ಯೆ ಭರಿಸಲು ಸರ್ಕಾರಕ್ಕೆ ತಿಳಿಸಿದ್ದಾರೆ.

ಎರಡೆರಡು ರೀತಿ ಸೌಲಭ್ಯ ಒದಗಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ರಾಷ್ಟ್ರಪತಿಯಾಗಿದ್ದಾಗ ಬಂದಿದ್ದ ಉಡುಗೊರೆಗಳನ್ನು ತಮ್ಮ ಮನೆಗೆ ಸಾಗಿಸಿದ ಅರೋಪ ಕೂಡ ಪ್ರತಿಭಾ ಪಾಟೀಲ್ ಮೇಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT