ಪ್ರತಿಭಾ ಪಾಟೀಲ್ 
ದೇಶ

ಅನಗತ್ಯವಾಗಿ ಸುದ್ದಿಯಾಗುತ್ತಿರುವ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್

ಅಜ್ಜಿಗೆ ಅರಿವೆ ಚಿಂತೆ...ಮೊಮ್ಮಗಳಿಗೆ ಮದುವೆ ಚಿಂತೆ ಅನ್ನೋ ಆಗಿದೆ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ನಡೆ....

ನವದೆಹಲಿ: ಅಜ್ಜಿಗೆ ಅರಿವೆ ಚಿಂತೆ...ಮೊಮ್ಮಗಳಿಗೆ ಮದುವೆ ಚಿಂತೆ ಅನ್ನೋ ಆಗಿದೆ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ನಡೆ. ಹೌದು ಇಡೀ ದೇಶವೇ ಮಾಜಿ ರಾಷ್ಟ್ರಪತಿ ಹಾಗೂ ಮಕ್ಕಳ ಪ್ರೀತಿಯ ತಾತ ಡಾ. ಅಬ್ದುಲ್ ಕಲಾಂ ಅವರನ್ನು ಕಳೆದು ಕೊಂಡು ಶೋಕದಲ್ಲಿ ಮುಳುಗಿರುವಾಗ, ಇನ್ನೊಬ್ಬ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅನಗತ್ಯವಾಗಿ ಖ್ಯಾತೆ ತೆಗೆಯುತ್ತಿದ್ದಾರೆ.

ಮಾಧ್ಯಮಗಳ ವರದಿ ಪ್ರಕಾರ ಪ್ರತಿಭಾ ಪಾಟೀಲ್ ತಮ್ಮ ಪ್ರಯಾಣದ ಇಂಧನ ಭತ್ಯೆ ತುಂಬಿಕೊಡುವುದರ ಜೊತೆಗೆ ತಮಗೆ ಸರ್ಕಾರಿ ವಾಹನ ನೀಡುವುದು ಸೇರಿದಂತೆ ತಮ್ಮ ಖಾಸಗಿ ವಾಹನದಲ್ಲಿ ಸಂಚರಿಸಲು ಅನುವು ಮಾಡಿಕೊಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಸರ್ಕಾರದ ನಿಯಮದ ಪ್ರಕಾರ ಮಾಜಿ ರಾಷ್ಟ್ರಪತಿಯಾದವರಿಗೆ ಇಂಧನ ಭತ್ಯೆ ನೀಡಬಹುದು ಇಲ್ಲವೇ ಸರ್ಕಾರಿ ಕಾರು ಬಳಸಬಹುದಾಗಿದೆ. ಆದರೆ ಪ್ರತಿಭಾ ಪಾಟೀಲ್ ತಮ್ಮಸ್ವಂತ ವಾಹನ ಬಳಕೆ ಜೊತೆಗೆ ಸರ್ಕಾರಿ ವಾಹನ ಸೌಲಭ್ಯ ಒದಗಿಸುವಂತೆ ಕೇಳಿದ್ದಾರೆ. ಹಾಗೂ ಇಂಧನ ಭತ್ಯೆ ಭರಿಸಲು ಸರ್ಕಾರಕ್ಕೆ ತಿಳಿಸಿದ್ದಾರೆ.

ಎರಡೆರಡು ರೀತಿ ಸೌಲಭ್ಯ ಒದಗಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ರಾಷ್ಟ್ರಪತಿಯಾಗಿದ್ದಾಗ ಬಂದಿದ್ದ ಉಡುಗೊರೆಗಳನ್ನು ತಮ್ಮ ಮನೆಗೆ ಸಾಗಿಸಿದ ಅರೋಪ ಕೂಡ ಪ್ರತಿಭಾ ಪಾಟೀಲ್ ಮೇಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT