ಏರ್ ಇಂಡಿಯಾ ಸಂಸ್ಥೆ ವಿಮಾನ(ಸಾಂಕೇತಿಕ ಚಿತ್ರ) 
ದೇಶ

ಮಾನವ ಕಳ್ಳಸಾಗಾಣಿಕೆ: ಇಬ್ಬರು ಏರ್ ಇಂಡಿಯಾ ಸಿಬ್ಬಂದಿಗಳ ಬಂಧನ

ಮಾನವ ಕಳ್ಳಸಾಗಣಿಕೆ ಪ್ರಕರಣದಲ್ಲಿ ನವದೆಹಲಿ ಪೊಲೀಸರು ಇಬ್ಬರು ಏರ್ ಇಂಡಿಯಾ ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ನವದೆಹಲಿ: ಮಾನವ ಕಳ್ಳಸಾಗಣಿಕೆ ಪ್ರಕರಣದಲ್ಲಿ ನವದೆಹಲಿ ಪೊಲೀಸರು ಇಬ್ಬರು ಏರ್ ಇಂಡಿಯಾ ಸಿಬ್ಬಂದಿಗಳನ್ನು ಬಂಧಿಸಿದ್ದಾರೆ. ಭೀಕರ ಭೂಕಂಪಕ್ಕೆ ತುತ್ತಾದ ನೇಪಾಳದ ಮಹಿಳೆಯರನ್ನು ಕಳ್ಳಸಾಗಣಿಕೆ ಮಾಡಲಾಗುತ್ತಿದ್ದ ಜಾಲ ಈ ಬಂಧನದ ಮೂಲಕ ಬಯಲಾಗಿದೆ.

ನವದೆಹಲಿಯ ವಿಮಾನ ನಿಲ್ದಾಣದ ಹಿರಿಯ ಅಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಗಲ್ಫ್ ರಾಷ್ಟ್ರದಲ್ಲಿ ಉತ್ತಮ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೇಪಾಳಿ ಮಹಿಳೆಯರನ್ನು ಕಳ್ಳಸಾಗಣೆ ಮಾಡಲಾಗುತ್ತಿದ್ದ ಕಾರ್ಯಾಚರಣೆ ಬೆಳಕಿಗೆ ಬಂದಿದೆ. ಈ ವರೆಗೂ 28 ನೇಪಾಳಿ ಮಹಿಳೆಯರನ್ನು ಗುರುತಿಸಲಾಗಿದೆ.

ನವದೆಹಲಿಯಿಂದ ದುಬೈ ಗೆ ಹೊರಟಿದ್ದ ಮೊದಲ 7 ಜನರ ತಂಡದ ಮಹಿಳೆಯರ ಪ್ರಯಾಣ ದಾಖಲೆಗಳಿಗೆ ವಲಸೆ ನಿಯಂತ್ರಣ ಕಾಯ್ದೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸದೇ ಒಪ್ಪಿಗೆ ಸೂಚಿಸಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಕಾಯ್ದೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸದೇ ಇರುವುದರಿಂದ ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳ ಸಾಗಾಣಿಕೆ ನಡೆಸುತ್ತಿರುವ ಸಾಧ್ಯತೆಗಳ ಬಗ್ಗೆ ಪೊಲೀಸರಿಗೆ ಅನುಮಾನ ಬಂದಿದೆ. ಈ ವೇಳೆ ಏರ್ ಇಂಡಿಯಾ ಗ್ರೌಂಡ್ ಸಿಬ್ಬಂದಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರತಿ ಮಹಿಳೆಗೂ 90 ಡಾಲರ್ ನಂತೆ ಹಣ ಪಡೆದು  ಪ್ರಯಾಣಕ್ಕೆ ಅನುಕೂಲವಾಗುವ ರೀತಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಮಹೇಶ್ ಗುಪ್ತಾ ಹಾಗೂ ಕಪಿಲ್ ಕುಮಾರ್ ಏರ್ ಇಂಡಿಯಾದ ಬಂಧಿತ ಸಿಬ್ಬಂದಿಗಳಾಗಿದ್ದಾರೆ. ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ನೇಪಾಳಿ ಪ್ರಜೆಗಳನ್ನು ಸಹ ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT