ಯಾಕುಬ್ ಮೆಮನ್ ಗೆ ಗಲ್ಲು: ಮುಂಬೈ, ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಣೆ (ಸಂಗ್ರಹ ಚಿತ್ರ) 
ದೇಶ

ಯಾಕುಬ್ ಮೆಮನ್ ಗೆ ಗಲ್ಲು: ಮುಂಬೈ, ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಣೆ

1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ, ಉಗ್ರ ಯಾಕುಬ್ ಮೆಮನ್ ಗೆ ಗಲ್ಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿರುವಂತೆ ಎಚ್ಚರಿಕೆ ವಹಿಸಿರುವ ಸರ್ಕಾರವು ಗುರುವಾರ ಮುಂಬೈ ಹಾಗೂ ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಿಸಿದೆ ಎಂದು ತಿಳಿದುಬಂದಿದೆ...

ನವದೆಹಲಿ: 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ, ಉಗ್ರ ಯಾಕುಬ್ ಮೆಮನ್ ಗೆ ಗಲ್ಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿರುವಂತೆ ಎಚ್ಚರಿಕೆ ವಹಿಸಿರುವ ಸರ್ಕಾರವು ಗುರುವಾರ ಮುಂಬೈ ಹಾಗೂ ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಿಸಿದೆ ಎಂದು ತಿಳಿದುಬಂದಿದೆ.

ಮುಂಬೈ ಸರಣಿ ಸ್ಫೋಟದ ಅಪರಾಧಿ, ಉಗ್ರ ಯಾಕುಬ್ ಮೆಮನ್​ಗೆ ವಿಧಿಸಿದ್ದ ಗಲ್ಲು ಶಿಕ್ಷೆ ವಿರೋಧಿಸಿ ಹಲವು ದಿನಗಳಿಂದಲೂ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿತ್ತು. ಆದರೆ, ಯಾವುದೇ ಅಭಿಪ್ರಾಯಗಳನ್ನು ಲೆಕ್ಕಿಸದ ಸರ್ಕಾರವು ತನ್ನ ನಿಲುವನ್ನೇ ಅಂತಿಮವಾಗಿರಿಸಿಕೊಂಡು ಇಂದು ಬೆಳಗ್ಗೆ 6.30 ವೇಳೆಯಲ್ಲಿ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಗಲ್ಲು ಶಿಕ್ಷೆ ವಿಧಿಸಿದೆ.

ಹೀಗಾಗಿ ಪ್ರಕರಣ ಸಂಬಂಧ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿರುವ ಭದ್ರತಾ ಅಧಿಕಾರಿಗಳು ಮುಂಬೈ ಹಾಗೂ ದೆಹಲಿಯಾದ್ಯಂತ ಭದ್ರತೆಗಳನ್ನು ಹೆಚ್ಚಿಸಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿದೆ ಎಂದು ಹೇಳಲಾಗುತ್ತಿದೆ.

1993ರಲ್ಲಿ ನಡೆದ ಮುಂಬೈ ಸರಣಿ ಸ್ಫೋಟದಲ್ಲಿ ಸುಮಾರು 273 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಭೂಗತ ಪಾತಕಿಗೆ ಇಂದು ಮಹಾರಾಷ್ಟ್ರದ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಗಲ್ಲು ಶಿಕ್ಷೆ ಜಾರಿ ಮಾಡಲಾಗಿದೆ. ಗಲ್ಲು ಶಿಕ್ಷೆ ಜಾರಿ ವೇಳೆ ನ್ಯಾಯಾಧೀಶರು, ಜೈಲು ವೈದ್ಯರು, ಡಿಐಜಿ ಮತ್ತು ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel