ಯಾಕೂಬ್ ಮೆಮನ್ 
ದೇಶ

ರಾಷ್ಟ್ರಪತಿಯಿಂದ ಕ್ಷಮಾದಾನ ಅರ್ಜಿ ತಿರಸ್ಕಾರ: ಯಾಕೂಬ್ ಮೆಮನ್ ಗೆ ಗಲ್ಲು

1993 ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಯಾಕೂಬ್ ಮೆಮನ್ ಎರಡನೇ ಬಾರಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕರಿಸಿದ್ದಾರೆ.

ನವದೆಹಲಿ: 1993 ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಯಾಕೂಬ್ ಮೆಮನ್ ಎರಡನೇ ಬಾರಿ ಸಲ್ಲಿಸಿದ್ದ  ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕರಿಸಿದ್ದಾರೆ. ನಿಗದಿಯಂತೆಯೇ ಗುರುವಾರ ಬೆಳಿಗ್ಗೆ ನಾಗ್ಪುರ ಜೈಲಿನಲ್ಲಿ ಯಾಕೂಬ್ ಮೆಮನ್ ಗೆ ಗಲ್ಲುಶಿಕ್ಷೆ ವಿಧಿಸಲಾಗುತ್ತದೆ. 

ಕ್ಷಮಾದಾನ ಅರ್ಜಿ ಬಗ್ಗೆ ಚರ್ಚೆ ನಡೆಸಲು ರಾಷ್ಟ್ರಪತಿ ಭವನಕ್ಕೆ ತೆರಳಿದ್ದ ರಾಜನಾಥ್ ಸಿಂಗ್ ಯಾಕೂಬ್ ಮೆಮನ್ ಗೆ ಗಲ್ಲುಶಿಕ್ಷೆ ವಿಧಿಸುವ ಬಗ್ಗೆ ಪುನರ್ ಪರಿಶೀಲನೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ನಂತರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ. 

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರೊಂದಿಗೆ ಸತತ 2 ಗಂಟೆಗಳ ಕಾಲ ಯಾಕೂಬ್ ಮೆಮನ್ ಅರ್ಜಿ ಬಗ್ಗೆ ಚರ್ಚೆ ನಡೆಸಿದ್ದರು. ಸಚಿವ ಸಂಪುಟದ ಸಲಹೆಯನ್ನು ಪರಿಗಣಿಸಿರುವ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ. 

ಇದಕ್ಕೂ ಮುನ್ನ ಗಲ್ಲು ಶಿಕ್ಷೆ ಪ್ರಶ್ನಿಸಿ ಯಾಕೂಬ್ ಮೆಮನ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು. ವಿಚಾರಣೆ ನಡೆಸಿದ ನ್ಯಾಯಾಮೂರ್ತಿಗಳಾದ ಡಿ.ಮಿಶ್ರಾ, ನ್ಯಾ.ಪಿ.ಸಿ ಪಂತ್ ನೇತೃತ್ವದ ವಿಸ್ತೃತ ಪೀಠ ಅರ್ಜಿಯನ್ನು ವಜಾಗೊಳಿಸಿತ್ತು. ಈ ಮೂಲಕ ಯಾಕೂಬ್ ಮೆಮನ್ ಕಾನೂನು ಹೋರಾಟದ ಕೊನೇ ಅವಕಾಶದಲ್ಲೂ ಸೋಲು ಕಂಡಂತಾಗಿದೆ.
ನಿನ್ನೆ ಯಾಕೂಬ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ದ್ವಿಸದಸ್ಯ ಪೀಠದ ನ್ಯಾಯಾಧೀಶರ ನಡುವೆ ಭಿನ್ನಾಭಿಪ್ರಾಯ ಉಂಟಾದ ಹಿನ್ನಲೆಯಲ್ಲಿ ಅರ್ಜಿ ವಿಚಾರಣೆಯನ್ನು  ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಾಪೀಠಕ್ಕೆ ವರ್ಗಾವಣೆ ಮಾಡಿ, ಗಲ್ಲು ಶಿಕ್ಷೆಗೆ ತಡೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!