ರಾಜನಾಥ್ ಸಿಂಗ್ 
ದೇಶ

ಗುರುದಾಸ್‌ಪುರ ದಾಳಿಯ ಉಗ್ರರು ಬಂದಿದ್ದು ಪಾಕ್‌ನಿಂದ: ರಾಜನಾಥ್ ಸಿಂಗ್

ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ದೀನಾನಗರ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಜನನಿಬಿಡ ಪ್ರದೇಶಗಳ ಮೇಲೆ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ...

ನವದೆಹಲಿ: ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ದೀನಾನಗರ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಜನನಿಬಿಡ ಪ್ರದೇಶಗಳ ಮೇಲೆ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ ರವಿ ನದಿಯ ಮೂಲಕ ಭಾರತ ಪ್ರವೇಶಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ದಾಳಿಯ ಬಗ್ಗೆ ರಾಜ್ಯಸಭೆಗೆ ಮಾಹಿತಿ ನೀಡಿದ ಗೃಹ ಸಚಿವರು, ಜಿಪಿಎಸ್ ಮಾಹಿತಿ ಪ್ರಕಾರ, ಉಗ್ರರು ಪಾಕಿಸ್ತಾನದಿಂದ ರವಿ ನದಿಯ ಮೂಲಕ ಭಾರತ ಪ್ರವೇಶಿಸಿದ್ದಾರೆ ಎಂದರು.

ಉಗ್ರರ ವಿರುದ್ಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಪಂಜಾಬ್ ಪೊಲೀಸರನ್ನು ಅಭಿನಂದಿಸಿದ ರಾಜನಾಥ್ ಸಿಂಗ್, ಗಡಿಯಲ್ಲಿ ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿರುವವರಿಗೆ ಭಾರತ ತಕ್ಕ ಉತ್ತರ ನೀಡಲಿದೆ ಎಂದರು.

ಒಂದು  ಜಿಪಿಎಸ್ ಪರಿಕರದಲ್ಲಿ ತಲ್‍ವಾಂಡಿ, ಪರಮಾನಂದ ಗ್ರಾಮ, ದೀನಾನಗರ ಜಾಗಗಳನ್ನು ಗುರುತುಮಾಡಲಾಗಿದೆ. ಮತ್ತೊಂದರಲ್ಲಿ ಗುರುದಾಸ್‍ಪುರ್ ಜನವಸತಿ ಪ್ರದೇಶಗಳನ್ನು ಗುರುತು  ಮಾಡಲಾಗಿದೆ. ಈ ಮೂಲಕ ಉಗ್ರರು, ತಮ್ಮ ದಾಳಿಗೆ ಜನನಿಬಿಡ ಪ್ರದೇಶಗಳನ್ನೇ ಗುರಿಯಾಗಿಸಿಕೊಂಡಿರುವುದು ದೃಢಪಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

ದರ್ಶನ್ ಲಾಕಪ್ ಡೆತ್: ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿ 4 ಮಂದಿ ಅಮಾನತು!

'ನಮ್ ಜೊತೆ ಯುದ್ಧ ಬೇಕು ಅಂದ್ರೆ.. ನಾವು ಸಿದ್ಧ': ಯೂರೋಪ್ ಗೆ Vladimir Putin ಬಹಿರಂಗ ಎಚ್ಚರಿಕೆ

Video: 'ಅಯೋಧ್ಯೆ ಮಾತ್ರವಲ್ಲ.. ಮುಸ್ಲಿಮರು ಇನ್ನೂ 2 ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ, ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ': Muhammad

SCROLL FOR NEXT