ರಾಜನಾಥ್ ಸಿಂಗ್ 
ದೇಶ

ಗುರುದಾಸ್‌ಪುರ ದಾಳಿಯ ಉಗ್ರರು ಬಂದಿದ್ದು ಪಾಕ್‌ನಿಂದ: ರಾಜನಾಥ್ ಸಿಂಗ್

ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ದೀನಾನಗರ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಜನನಿಬಿಡ ಪ್ರದೇಶಗಳ ಮೇಲೆ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ...

ನವದೆಹಲಿ: ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ದೀನಾನಗರ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಜನನಿಬಿಡ ಪ್ರದೇಶಗಳ ಮೇಲೆ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ ರವಿ ನದಿಯ ಮೂಲಕ ಭಾರತ ಪ್ರವೇಶಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ದಾಳಿಯ ಬಗ್ಗೆ ರಾಜ್ಯಸಭೆಗೆ ಮಾಹಿತಿ ನೀಡಿದ ಗೃಹ ಸಚಿವರು, ಜಿಪಿಎಸ್ ಮಾಹಿತಿ ಪ್ರಕಾರ, ಉಗ್ರರು ಪಾಕಿಸ್ತಾನದಿಂದ ರವಿ ನದಿಯ ಮೂಲಕ ಭಾರತ ಪ್ರವೇಶಿಸಿದ್ದಾರೆ ಎಂದರು.

ಉಗ್ರರ ವಿರುದ್ಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಪಂಜಾಬ್ ಪೊಲೀಸರನ್ನು ಅಭಿನಂದಿಸಿದ ರಾಜನಾಥ್ ಸಿಂಗ್, ಗಡಿಯಲ್ಲಿ ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿರುವವರಿಗೆ ಭಾರತ ತಕ್ಕ ಉತ್ತರ ನೀಡಲಿದೆ ಎಂದರು.

ಒಂದು  ಜಿಪಿಎಸ್ ಪರಿಕರದಲ್ಲಿ ತಲ್‍ವಾಂಡಿ, ಪರಮಾನಂದ ಗ್ರಾಮ, ದೀನಾನಗರ ಜಾಗಗಳನ್ನು ಗುರುತುಮಾಡಲಾಗಿದೆ. ಮತ್ತೊಂದರಲ್ಲಿ ಗುರುದಾಸ್‍ಪುರ್ ಜನವಸತಿ ಪ್ರದೇಶಗಳನ್ನು ಗುರುತು  ಮಾಡಲಾಗಿದೆ. ಈ ಮೂಲಕ ಉಗ್ರರು, ತಮ್ಮ ದಾಳಿಗೆ ಜನನಿಬಿಡ ಪ್ರದೇಶಗಳನ್ನೇ ಗುರಿಯಾಗಿಸಿಕೊಂಡಿರುವುದು ದೃಢಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ