ಯಾಕೂಬ್ ಮೆಮನ್ ಅಂತ್ಯಕ್ರಿಯೆ 
ದೇಶ

ಚಂದನ್ ವಾಡಿ ಯಲ್ಲಿ ನಡೆದ ಯಾಕೂಬ್ ಮೆಮೆನ್ ಅಂತ್ಯಕ್ರಿಯೆ

ಜು.30 ರ ಬೆಳಿಗ್ಗೆ ನೇಣುಗಂಬಕ್ಕೆ ಏರಿಸಲಾದ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ ನ ಅಂತ್ಯಕ್ರಿಯೆ ಸ್ಮಶಾನ ಭೂಮಿಯಲ್ಲಿ ನಡೆದಿದೆ.

ಮುಂಬೈ: ಜು.30 ರ ಬೆಳಿಗ್ಗೆ ನೇಣುಗಂಬಕ್ಕೆ ಏರಿಸಲಾದ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ ನ ಅಂತ್ಯಕ್ರಿಯೆ ನಾಗ್ಪುರದ ಬಡಾ ಕಾಬ್ರಿಸ್ತಾನ ರಸ್ತೆಯಲ್ಲಿರುವ ಚಂದನ್ ವಾಡಿ ಸ್ಮಶಾನ ಭೂಮಿಯಲ್ಲಿ ನಡೆದಿದೆ.

ಯಾಕೂಬ್ ನನ್ನು ಗಲ್ಲಿಗೇರಿಸಿದ ನಂತರ, ಕುಟುಂಬ ಅಂತಿಮ ವಿಧಿಗಳನ್ನು ಮುಂಬೈನಲ್ಲಿ ನೆರವೇರಿಸಲು ಕಠಿಣ ಷರತ್ತುಳನ್ನು ವಿಧಿಸಿ ಅವಕಾಶ ನಿಡಲಾಗಿತ್ತು.  ಶವವನ್ನು ಮುಂಬೈ ನಲ್ಲಿರುವ ಯಾಕೂಬ್ ಮೆಮನ್ ನ ಮಾಹಿಮ್ ನಿವಾಸಕ್ಕೆ ತರಲಾಯಿತು. ಪ್ರಾಥನೆಗಳ ನಂತರ ಕಾಬ್ರಿಸ್ತಾನ ರಸ್ತೆಯಲ್ಲಿರುವ ಚಂದನ್ ವಾಡಿ ಸ್ಮಶಾನ ಭೂಮಿಯಲ್ಲಿ ಯಾಕೂಬ್ ಅಂತ್ಯಕ್ರಿಯೆ ನಡೆದಿದೆ.

ಜೈಲು ಅಧಿಕಾರಿಗಳು ಕುಟುಂಬ ವಶಕ್ಕೆ ನೀಡದೆ ಜೈಲಿನ ಆವರಣದಲ್ಲೇ ಅಂತಿಮ ವಿಧಿಯನ್ನು ನಡೆಸಲು ನಿರ್ಧರಿಸಿದ್ದರು. ಆದರೆ ಯಾಕೂಬ್ ನನ್ನು ಗಲ್ಲಿಗೇರಿಸಿದ ನಂತರ, ಕುಟುಂಬ ಅಂತಿಮ ವಿಧಿಗಳನ್ನು ಮುಂಬೈನಲ್ಲಿ ನೆರವೇರಿಸಲು ಅನುವು ಮಾಡಿಕೊಡಲು ದೇಹವನ್ನು ವಶಕ್ಕೆ ನೀಡುವಂತೆ  ಮೆಮನ್ ಸಹೋದರ ಸುಲೈಮಾನ್ ಜೈಲು ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು. ಕಠಿಣ ಷರತ್ತುಗಳೊಂದಿಗೆ ಅನುಮತಿ ನೀಡಿ ದೇಹವನ್ನು ವಶಕ್ಕೆ ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT