ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡಾ (ಸಾಂದರ್ಭಿಕ ಚಿತ್ರ) 
ದೇಶ

ಕಲ್ಲಿದ್ದಲು ಹಗರಣ: ಮಧುಕೋಡ ಸೇರಿ 8 ಜನರ ವಿಚಾರಣೆ ಇಂದು

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡಾ, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಹೆಚ್.ಸಿ.ಗುಪ್ತಾ ಸೇರಿದಂತೆ 6 ಮಂದಿಯನ್ನು ಶುಕ್ರವಾರ ವಿಶೇಷ ನ್ಯಾಯಾಲಯವು ವಿಚಾರಣೆ ನಡೆಸಲಿದೆ ಎಂದು ಹೇಳಲಾಗುತ್ತಿದೆ...

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡಾ, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಹೆಚ್.ಸಿ.ಗುಪ್ತಾ ಸೇರಿದಂತೆ 6 ಮಂದಿಯನ್ನು ಶುಕ್ರವಾರ ವಿಶೇಷ ನ್ಯಾಯಾಲಯವು ವಿಚಾರಣೆ ನಡೆಸಲಿದೆ ಎಂದು ಹೇಳಲಾಗುತ್ತಿದೆ.

ಕಲ್ಲಿದ್ದಲು ಹಗರಣ ಸಂಬಂಧ ಜುಲೈ.14 ರಂದು ನಡೆದ ವಿಚಾರಣೆ ವೇಳೆ ನ್ಯಾ.ಭರತ್ ಪರಾಶರ್ ಅವರು, ಸರ್ಕಾರಿ ನೌಕರರಾದ ಬಸಂತ್ ಕುಮಾರ್ ಭಟ್ಟಾಚಾರ್ಯ ಹಾಗೂ ಬಿಪಿನ್ ಬಿಹಾರಿ ಸಿಂಗ್, ವಿನಿ ಕಬ್ಬಿಣ ಮತ್ತು ಉಕ್ಕು ಉದ್ಯೋಗ್ ಲಿಮಿಟೆಡ್(ವಿ.ಐ.ಎಸ್.ಯು.ಎಲ್) ನ ನಿರ್ದೇಶಕ ವೈಭವ್ ತುಲ್ಸ್ಯಾನ್, ಮಧುಕೋಡಾ ಅವರ ಆಪ್ತ ವಿಜಯ್ ಜೋಷಿ ಹಾಗೂ ಲೆಕ್ಕಪರಿಶೋಧಕರ ನವೀನ್ ಕುಮಾರ್ ಸೇರಿದಂತೆ ಹಗರಣಕ್ಕೆ ಸಂಬಂಧಿಸಿದ ಒಟ್ಟು 9 ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಐಪಿಸಿ ಸೆಕ್ಷನ್ 120 ಬಿ ( ಕ್ರಿಮಿನಲ್ ಸಂಚು) 420 (ಮೋಸ) ಪ್ರಕಾರ ಪ್ರತಿಯೊಬ್ಬ ಆರೋಪಿಯ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸುವಂತೆ ಸಿಬಿಐ ಪೊಲೀಸರಿಗೆ ಸೂಚನೆ ನೀಡಿದ್ದರು.

ನ್ಯಾಯಾಧೀಶರ ಸೂಚನೆಯಂತೆ ಸಿಬಿಐ ಪೊಲೀಸರು 9 ಆರೋಪಿಗಳ ವಿರುದ್ಧವೂ ದೋಷಾರೋಪ ಪಟ್ಟಿ ತಯಾರಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಈ ದೋಷಾರೋಪ ಪಟ್ಟಿಯನ್ನು ಪರಿಶೀಲಿಸಿರುವ ಸಿಬಿಐ ವಿಶೇಷ ನ್ಯಾಯಾಲಯವು ಮಧುಕೋಡಾ, ಹೆಚ್.ಸಿ ಗುಪ್ತಾ, ಜಾರ್ಖಂಡ್ ನ ಮಾಜಿ ಮುಖ್ಯ ಕಾರ್ಯದರ್ಶಿ ಅಶೋಕ್ ಕುಮಾರ್ ಬಸು ಸೇರಿದಂತೆ ಒಟ್ಟು 9 ಮಂದಿಯನ್ನು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ಕಲ್ಲಿದ್ದಲು ಹಂಚಿಕೆಯಲ್ಲಿ ಮಧು ಕೊಡ ಹಾಗೂ ಜಾರ್ಖಂಡ್ ನ ಮಾಜಿ ಮುಖ್ಯ ಕಾರ್ಯದರ್ಶಿ ಅಶೋಕ್ ಬಸು ವಿನಿ ಕಬ್ಬಿಣ ಮತ್ತು ಉಕ್ಕು ಉದ್ಯೋಗ್ ಸಂಸ್ಥೆಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಸಂಚು ರೂಪಿಸಿದ್ದರು ಎಂದು ಸಿಬಿಐ ಈ ಹಿಂದೆ ಕೋರ್ಟ್ ಗೆ ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?