ಕೊಮೆನ್ ಚಂಡಮಾರುತ 
ದೇಶ

ಕೊಮೆನ್ ಚಂಡಮಾರುತಕ್ಕೆ ಬಾಂಗ್ಲಾ-ಮಾಯನ್ಮಾರ್ ನಲ್ಲಿ 33 ಸಾವು, 6 ಮಂದಿ ನಾಪತ್ತೆ

ಬಾಂಗ್ಲಾದೇಶ ಕರಾವಳಿಗೆ ''ಕೊಮೆನ್'' ಚಂಡಮಾರುತ ಅಪ್ಪಳಿಸಿದೆ. ಇದರ ಪ್ರಭಾವದಿಂದಾಗಿ 2 ದಿನಗಳಲ್ಲಿ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಧಾರಾಕಾರ ಮಳೆಯಾಗಲಿದೆ...

ನವದೆಹಲಿ: ಬಾಂಗ್ಲಾದೇಶ ಹಾಗೂ ಮಾಯನ್ಮಾರ್ ಗೆ ''ಕೊಮೆನ್'' ಚಂಡಮಾರುತ ಅಪ್ಪಳಿಸಿದ್ದು, ಪರಿಣಾಮ 33 ಜನರು ಸಾವನ್ನಪ್ಪಿದ್ದು, 6 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಇದರ ಪ್ರಭಾವದಿಂದಾಗಿ 2 ದಿನಗಳಲ್ಲಿ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಲ್ಕತ್ತದ ಪೂರ್ವ ಆಗ್ನೇಯ ದಿಕ್ಕಿನಿಂದ 300 ಕಿ.ಮೀ ದೂರದಲ್ಲಿ ರಚನೆಯಾಗಿರುವ ಕೊಮೆನ್, ಬಾಂಗ್ಲಾದೇಶದಲ್ಲಿ ಭಾರಿ ಮಳೆ ಸುರಿಸಿ, ಕ್ರಮೇಣ ಕ್ಷೀಣವಾಗಿ ಪಶ್ಚಿಮ ವಾಯುವ್ಯ ದಿಕ್ಕಿನತ್ತ ಸಾಗಲಿದೆ. ''ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಕೆಲ ಪ್ರದೇಶಗಳಲ್ಲಿ ಭಾರಿ ಮತ್ತು ಪ್ರಬಲ ಮಳೆಯಾಗಲಿದೆ. ಪಶ್ಚಿಮ ಬಂಗಾಳದಲ್ಲಿ ಇನ್ನೆರಡು ದಿನಗಳ ಕಾಲ ಭಾರಿ ಮತ್ತು ಅತ್ಯಂತ ಪ್ರಬಲ ಮಳೆಯಾಗುವ ಸಾಧ್ಯತೆಗಳಿವೆ.

ಒಡಿಶಾದ ಕೆಲ ಭಾಗ ಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ, ಒಡಿಶಾದ 5 ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಅಲ್ಲದೆ, ಜಾರ್ಖಂಡ್‍ನಲ್ಲೂ ಚಂಡಮಾರುತದ ಪರಿಣಾಮವಾಗಿ ಮಳೆಯಾಗಲಿದೆ. ಪಶ್ಚಿಮ ಬಂಗಾಳದಲ್ಲಿ 26 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ'' ಎಂದು ಹವಾಮಾನ ಇಲಾಖೆ ತಿಳಿಸಿದೆ. ಗಂಟೆಗೆ 70 ಕಿ.ಮಿ  ವೇಗದಲ್ಲಿ ಸುತ್ತುತ್ತಿರುವ ಚಂಡಮಾರುತದಿಂದಾಗಿ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT