ಗುರುದಾಸ್ ಕಾಮತ್ - ಸ್ಮೃತಿ ಇರಾನಿ 
ದೇಶ

ಸ್ಮೃತಿ ಇರಾನಿಗೆ ಸಚಿವ ಸ್ಥಾನದ ಹಿಂದೆ ಮೋದಿ ಹಿತಾಸಕ್ತಿ: ಕಾಂಗ್ರೆಸ್ ನೇತಾರ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ವಾಗ್ಧಾಳಿ ನಡೆಸಿರುವ ಕಾಂಗ್ರೆಸ್ ನೇತಾರ ಗುರುದಾಸ್...

ಜೈಪುರ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ವಾಗ್ಧಾಳಿ ನಡೆಸಿರುವ ಕಾಂಗ್ರೆಸ್ ನೇತಾರ ಗುರುದಾಸ್ ಕಾಮತ್, ಮೋದಿ ಹಿತಾಸಕ್ತಿಯಿಂದ ಸ್ಮೃತಿ ಇರಾನಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿರುವ ಹಳ್ಳಿಗಳಲ್ಲಿ ಮುನಿಸಿಪಲ್ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಗುರುದಾಸ್ ಕಾಮತ್, ಬಿಜೆಪಿ ನಾಯಕಿ ಸ್ಮೃತಿ ಇರಾನಿಗೆ ಸಚಿವೆಯಾಗುವ ಅರ್ಹತೆಗಳು ಏನಿವೆ ಎಂದು ಪ್ರಶ್ನಿಸಿದ್ದು, ಮೋದಿ ಅವರಿಗೆ ರೈತರ ಬಗ್ಗೆ ಗಮನ ಹರಿಸುವುದಕ್ಕಿಂತ ಟಿವಿ, ಸೀರಿಯಲ್ ನೋಡುವುದರಲ್ಲಿ ಆಸಕ್ತಿ ಹೆಚ್ಚಿದೆ ಎಂದು ಟೀಕಿಸಿದ್ದಾರೆ.

ಮೋದಿ ಹಿತಾಸಕ್ತಿಯಿಂದಾಗಿ ಸ್ಮೃತಿ ಇರಾನಿಗೆ ಸಚಿವೆ ಸ್ಥಾನ ನೀಡಲಾಗಿದೆ. ಇರಾನಿ ಕುಟಂಬದವರು ಆರ್ಥಿಕವಾಗಿ ಹಿಂದುಳಿದವರು. ವರ್ಸೋವಾದಲ್ಲಿ ಫಾಸ್ಠ್ ಫುಡ್ ಹೋಟೆಲ್ ನಲ್ಲಿ ಕೆಲಸ ಮಾಡಿ, ಟೇಬಲ್ ಒರೆಸೋ ಕೆಲಸ ಮಾಡುತ್ತಿದ್ದವರು. ಕೇವಲ 10ನೇ ತರಗತಿ ಓದಿರುವ ಇರಾನಿ, ಮುಂಬೈನ ರೆಸ್ಟೋರೆಂಟ್ ಗಳಲ್ಲಿ ಕೆಲಸ ಮಾಡಿದಂತವರು. ನಂತರ ಆಕೆ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿರಿಸಿದ್ದು.

ಇಂತಹ ಅವಿದ್ಯಾವಂತೆಗೆ ಕೇಂದ್ರದ ಸಚಿವ ಸ್ಥಾನ ನೀಡುವುದೆಂದರೆ, ಇದು ವೈಯಕ್ತಿಕ ಹಿತಾಸಕ್ತಿಯಿಂದಾಗಿ ಮಾತ್ರ ಸಾಧ್ಯ. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಸ್ಮೃತಿ ಇರಾನಿಯವರನ್ನು ಮೋದಿ ಅವರ ಸಚಿವೆಯನ್ನಾಗಿ ಮಾಡಿದರು ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT