ಗುರುದಾಸ್ ಕಾಮತ್ - ಸ್ಮೃತಿ ಇರಾನಿ 
ದೇಶ

ಸ್ಮೃತಿ ಇರಾನಿಗೆ ಸಚಿವ ಸ್ಥಾನದ ಹಿಂದೆ ಮೋದಿ ಹಿತಾಸಕ್ತಿ: ಕಾಂಗ್ರೆಸ್ ನೇತಾರ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ವಾಗ್ಧಾಳಿ ನಡೆಸಿರುವ ಕಾಂಗ್ರೆಸ್ ನೇತಾರ ಗುರುದಾಸ್...

ಜೈಪುರ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ವಾಗ್ಧಾಳಿ ನಡೆಸಿರುವ ಕಾಂಗ್ರೆಸ್ ನೇತಾರ ಗುರುದಾಸ್ ಕಾಮತ್, ಮೋದಿ ಹಿತಾಸಕ್ತಿಯಿಂದ ಸ್ಮೃತಿ ಇರಾನಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿರುವ ಹಳ್ಳಿಗಳಲ್ಲಿ ಮುನಿಸಿಪಲ್ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಗುರುದಾಸ್ ಕಾಮತ್, ಬಿಜೆಪಿ ನಾಯಕಿ ಸ್ಮೃತಿ ಇರಾನಿಗೆ ಸಚಿವೆಯಾಗುವ ಅರ್ಹತೆಗಳು ಏನಿವೆ ಎಂದು ಪ್ರಶ್ನಿಸಿದ್ದು, ಮೋದಿ ಅವರಿಗೆ ರೈತರ ಬಗ್ಗೆ ಗಮನ ಹರಿಸುವುದಕ್ಕಿಂತ ಟಿವಿ, ಸೀರಿಯಲ್ ನೋಡುವುದರಲ್ಲಿ ಆಸಕ್ತಿ ಹೆಚ್ಚಿದೆ ಎಂದು ಟೀಕಿಸಿದ್ದಾರೆ.

ಮೋದಿ ಹಿತಾಸಕ್ತಿಯಿಂದಾಗಿ ಸ್ಮೃತಿ ಇರಾನಿಗೆ ಸಚಿವೆ ಸ್ಥಾನ ನೀಡಲಾಗಿದೆ. ಇರಾನಿ ಕುಟಂಬದವರು ಆರ್ಥಿಕವಾಗಿ ಹಿಂದುಳಿದವರು. ವರ್ಸೋವಾದಲ್ಲಿ ಫಾಸ್ಠ್ ಫುಡ್ ಹೋಟೆಲ್ ನಲ್ಲಿ ಕೆಲಸ ಮಾಡಿ, ಟೇಬಲ್ ಒರೆಸೋ ಕೆಲಸ ಮಾಡುತ್ತಿದ್ದವರು. ಕೇವಲ 10ನೇ ತರಗತಿ ಓದಿರುವ ಇರಾನಿ, ಮುಂಬೈನ ರೆಸ್ಟೋರೆಂಟ್ ಗಳಲ್ಲಿ ಕೆಲಸ ಮಾಡಿದಂತವರು. ನಂತರ ಆಕೆ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿರಿಸಿದ್ದು.

ಇಂತಹ ಅವಿದ್ಯಾವಂತೆಗೆ ಕೇಂದ್ರದ ಸಚಿವ ಸ್ಥಾನ ನೀಡುವುದೆಂದರೆ, ಇದು ವೈಯಕ್ತಿಕ ಹಿತಾಸಕ್ತಿಯಿಂದಾಗಿ ಮಾತ್ರ ಸಾಧ್ಯ. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಸ್ಮೃತಿ ಇರಾನಿಯವರನ್ನು ಮೋದಿ ಅವರ ಸಚಿವೆಯನ್ನಾಗಿ ಮಾಡಿದರು ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT