ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ) 
ದೇಶ

ಹೇಡಿತನವೇ ಆರ್ ಎಸ್ಎಸ್ ನ ನಿಜಗುಣ: ರಾಹುಲ್ ಗಾಂಧಿ

ಆರ್ ಎಸ್ಎಸ್ ವಿದ್ಯಾರ್ಥಿಗಳಿಗೆ ಹೆದರುತ್ತಿದೆ. ಹೇಡಿತನವೇ ಅದರ ನಿಜವಾದ ಸ್ವರೂಪವಾಗಿದ್ದು, ಎಫ್ ಟಿಐಐ ವಿವಾದ ವಿಷಯವಿಡಿದುಕೊಂಡು ಕಳಪೆ ಮಟ್ಟದ ಪ್ರಚಾರ ಮಾಡುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ...

ಪುಣೆ: ಆರ್ ಎಸ್ಎಸ್ ವಿದ್ಯಾರ್ಥಿಗಳಿಗೆ ಹೆದರುತ್ತಿದೆ. ಹೇಡಿತನವೇ ಅದರ ನಿಜವಾದ ಸ್ವರೂಪವಾಗಿದ್ದು, ಎಫ್ ಟಿಐಐ ವಿವಾದ ವಿಷಯವಿಡಿದುಕೊಂಡು ಕಳಪೆ ಮಟ್ಟದ ಪ್ರಚಾರ ಮಾಡುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ.

ಈ ಕುರಿತಂತೆ ಇಂದು ಪುಣೆಯ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಗೆ ಭೇಟಿ ನೀಡಿ ಮಾತನಾಡಿರುವ ಅವರು, ಒಬ್ಬ ಸಾಮಾನ್ಯ ವ್ಯಕ್ತಿಯನ್ನು ಉನ್ನತ ಅಧಿಕಾರಿಗಳ ಮಧ್ಯೆ ಕೂರಿಸಲಾಗುತ್ತಿದೆ. ಆರ್ ಎಸ್ಎಸ್ ಸಂಘಟನೆಯು ತನ್ನ ಶಕ್ತಿ ಬಳಸಿಕೊಂಡು ಕಳಪೆ ಮಟ್ಟದ ಪ್ರಚಾರ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇಷ್ಟಕ್ಕೂ ಎಫ್ ಟಿಐಐ ಕುರಿತ ವಿದ್ಯಾರ್ಥಿಗಳ ಪ್ರತಿಭಟನೆಗೆ ಸರ್ಕಾರ ಏಕೆ ವಿರೋಧಿಸುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ. ಎಫ್ ಟಿಐಐ ಅಧ್ಯಕ್ಷ ನೇಮಕ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನೇ ಆರ್ ಎಸ್ಎಸ್ ಹಿಂದೂ ವಿರೋಧಿಗಳು ಎಂದು ಕರೆಯುತ್ತಿದೆ. ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆರ್ಎಸ್ಎಸ್ ಹೆದರುತ್ತಿದ್ದು, ದೇಶದೆಲ್ಲೆಡೆ ಆರ್ಎಸ್ಎಸ್ ಗುಂಡಾಗಳು ಹಾಗೂ ರೌಡಿಗಳಂತೆ ವರ್ತಿಸುತ್ತಿದೆ. ಎಫ್ ಟಿಐಐ ಅಧ್ಯಕ್ಷ ನೇಮಕಾತಿ ನಿರ್ಧಾರವನ್ನು ನರೇಂದ್ರ ಮೋದಿ ಅವರೇ ಕೈಗೊಂಡಿದ್ದರೆ, ಈ ನಿರ್ಧಾರದಿಂದ ಬಿಜೆಪಿ ಎಂದಿಗೂ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಪುಣೆಯ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯ (ಎಫ್ ಟಿಐಐ) ಅಧ್ಯಕ್ಷರಾಗಿ ಗಜೇಂದ್ರ ಚೌಹಾಣ್ ಅವರನ್ನು ನೇಮಕ ಮಾಡಿರುವುದನ್ನು ವಿರೋಧಿಸಿ ಚಲನಚಿತ್ರ ಕಲಾವಿದರು ಹಾಗೂ ಎಫ್ ಟಿಐಐ ನ ವಿದ್ಯಾರ್ಥಿಗಳು ಪ್ರತಿಭಟನೆಗಳಿದಿದ್ದವು. ದಿನಕಳೆದಂತೆ ಈ ಕುರಿತಂತೆ ಪ್ರತಿಭಟನೆಗಳು ಕಾವೇರುತ್ತಿದ್ದು, ಎಲ್ಲೆಡೆ ಗಜೇಂದ್ರ ಚೌಹಾಣ್ ನೇಮಕ ವಿರುದ್ಧ ಕೂಗು ಕೇಳಿಬರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT