ಹಿರಿಯ ಗಾಂಧಿವಾದಿ ಸಸಿ ಪೆರುಮಾಳ್ (ಸಂಗ್ರಹ ಚಿತ್ರ) 
ದೇಶ

ಪ್ರತಿಭಟನೆ ನಡೆಸುತ್ತಲೇ ಅಸುನೀಗಿದ ಗಾಂಧಿವಾದಿ!

ಬದುಕಿನುದ್ದಕ್ಕೂ ಅನೇಕ ಪ್ರತಿಭಟನೆಗಳು, ನಿರಶನಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಗಾಂಧಿವಾದಿ ಸಸಿ ಪೆರುಮಾಳ್(59) ಶುಕ್ರವಾರ ಮದ್ಯದಂಗಡಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಲೇ ಅಸುನೀಗಿದ್ದಾರೆ...

ಚೆನ್ನೈ: ಬದುಕಿನುದ್ದಕ್ಕೂ ಅನೇಕ ಪ್ರತಿಭಟನೆಗಳು, ನಿರಶನಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಗಾಂಧಿವಾದಿ ಸಸಿ ಪೆರುಮಾಳ್(59) ಶುಕ್ರವಾರ ಮದ್ಯದಂಗಡಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಲೇ ಅಸುನೀಗಿದ್ದಾರೆ.

ಗುರುವಾರ ರಾಮೇಶ್ವರದಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಪೆರುಮಾಳ್, ಪ್ರತಿಭಟನೆಯಲ್ಲಿ ಭಾಗವಹಿಸುವ ಸಲುವಾಗಿಯೇ ಕನ್ಯಾಕುಮಾರಿಯ ಮಾರ್ಥಂಡ್ರಮ್ ಗೆ ಆಗಮಿಸಿದ್ದರು. ರಾಜ್ಯಾದ್ಯಂತ ಮದ್ಯ ನಿಷೇಧ ಮಾಡಬೇಕೆಂಬುದು ಅವರ ಆಗ್ರಹವಾಗಿತ್ತು.

ಶುಕ್ರವಾರ ಬೆಳಗ್ಗೆ ಮೊಬೈಲ್ ಫೋನ್ ಟವರ್ ಮೇಲೆ ಹತ್ತಿದ ಪೆರುಮಾಳ್, ಮದ್ಯ ನಿಷೇಧ ಜಾರಿಯಾಗದಿದ್ದರೆ ಮೇಲಿಂದ ಹಾರಿ ಪ್ರಾಣಬಿಡುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಹಲವು ಗಂಟೆಗಳ ಕಾಲ ಅವರನ್ನು ಮನವೊಲಿಸುವ ಪ್ರಯತ್ನ ನಡೆಯಿತಾದರೂ ಅವರು ಪಟ್ಟು ಬಿಡಲಿಲ್ಲ.  ಕೊನೆಗೆಜಿಲ್ಲಾಡಳಿತವುಮದ್ಯದಂಗಡಿಗಳ ಮೇಲೆ ನಿಷೇಧ ಹೇರುವುದಾಗಿ ಭರವಸೆ ನೀಡಿತು. ನಂತರ ಅಗ್ನಿ ಶಾಮಕ ಸಿಬ್ಬಂದಿಯು ಪೆರುಮಾಳ್ ರನ್ನು ಕೆಳಗೆ ಕರೆತರಲೆಂದು ಟವರ್ ಮೇಲೆ ಹತ್ತಿದರು.

ಆದರೆ, ಅಷ್ಟರಲ್ಲಾ ಗಲೇ ಟವರ್ ನಲ್ಲೇ ಪೆರುಮಾಳ್ ಪ್ರಜ್ಞೆ ತಪ್ಪಿ ಬಿದ್ದಿದ್ದರಲ್ಲದೇ ಎದೆಯಲ್ಲಿ ರಕ್ತ ಚಿಮ್ಮಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಸಾವಿಗೆ ಕಾರಣವೇನೆಂದು ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT