ತ್ರಿಪುರಾ ರಾಜ್ಯಪಾಲ ತಥಾಗತ ರಾಯ್ 
ದೇಶ

ಮೆಮನ್ ಅಂತ್ಯಕ್ರಿಯೆಯಲ್ಲಿ ಉಗ್ರರು: ರಾಯ್

ಯಾಕೂಬ್ ಮೆಮನ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದವರು ಸಂಭಾವ್ಯ ಭಯೋತ್ಪಾದಕರಿದ್ದರು ಎನ್ನುವ ಮೂಲಕ ತ್ರಿಪುರಾ ರಾಜ್ಯಪಾಲ ತಥಾಗತ ರಾಯ್ ಹೊಸ ವಿವಾದ ಸೃಷ್ಟಿಸಿದ್ದಾರೆ...

ತ್ರಿಪುರಾ: ಯಾಕೂಬ್ ಮೆಮನ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದವರು ಸಂಭಾವ್ಯ ಭಯೋತ್ಪಾದಕರಿದ್ದರು ಎನ್ನುವ ಮೂಲಕ ತ್ರಿಪುರಾ ರಾಜ್ಯಪಾಲ ತಥಾಗತ ರಾಯ್ ಹೊಸ ವಿವಾದ  ಸೃಷ್ಟಿಸಿದ್ದಾರೆ.

ರಾಯ್ ಹೇಳಿಕೆಗ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ ವ್ಯಕ್ತವಾಗಿದೆ. ಯಾಕೂಬ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದವರ ಮೇಲೆ ಗುಪ್ತಚರ ಇಲಾಖೆ ಕಣ್ಣಿಡಬೇಕು. ಸಂಬಂಧಿಗಳು, ಆಪ್ತ ಮಿತ್ರರ ಚಲನವಲನ ಗಮನಿಸಬೇಕು. ಅವರು ಉಗ್ರರಾಗಿರಲಿಕ್ಕೂ ಸಾಕು ಎಂದು ಅನುಮಾನ ವ್ಯಕ್ತಪಡಿಸಿ ರಾಯ್ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದರಿಂದ ಎಚ್ಚೆತ್ತ ರಾಯ್, ಕೂಡಲೇ ಸ್ಪಷ್ಟನೆ ನೀಡಿದ್ದಾರೆ.

`ದೇಶದ ಭದ್ರತೆ ಕುರಿತು ರಾಜ್ಯಪಾಲರಾದವರಿಗೆ ಕಾಳಜಿ ಇರಬೇಕು. ಮುನ್ನೆಚ್ಚರಿಕೆ ಯಿಂದ ನಾನು ಹಾಗೆ ಹೇಳಿದ್ದೇನೆ'. ಇದು ಒಂದು ಸಮುದಾಯವನ್ನು ಗುರಿಯಾಗಿರಿಸಿಕೊಂಡು ನೀಡಿದ ಹೇಳಿಕೆಯಲ್ಲ ಎಂದಿದ್ದಾರೆ. ಥತಾಗತಾ ರಾಯ್ ಅವರು ಕೋಮುದ್ವೇಷ ಬಿತ್ತುವ ಟ್ವೀಟ್ ಗಳಿಂದ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT