ವಸುಂದರಾ ರಾಜೇ 
ದೇಶ

ವಸುಂದರಾ ರಾಜೇ ಮೂರು ದಿನ ದೇವಾಲಯದಲ್ಲಿ ಇದ್ದುದ್ದೇಕೆ...?

ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಅವರು ಮಧ್ಯಪ್ರದೇಶದ ಪ್ರಸಿದ್ಧ ಮಾ ಪಿತಾಂಬರ ದೇವಾಲಯದಲ್ಲಿ ಮೂರು ದಿನ ವಿಶೇಷ ಪೂಜೆ ಸಲ್ಲಿಸಿದ್ದಾರೆ...

ಡಾಟಿಯಾ(ಮಧ್ಯಪ್ರದೇಶ): ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಅವರು ಮಧ್ಯಪ್ರದೇಶದ ಪ್ರಸಿದ್ಧ ಮಾ ಪಿತಾಂಬರ ದೇವಾಲಯದಲ್ಲಿ ಮೂರು  ದಿನ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೊಠಡಿಯೊಂದರಲ್ಲಿ ಮೂರು ದಿನ ಏಕಾಂಗಿಯಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂಬಿದವರ ಕೈ ಹಿಡಿಯುವ ಹಾಗೂ ಇಷ್ಟಾರ್ಥಗಳನ್ನು ಸಿದ್ಧಿಸುವ ಈ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರೆ ಒಳಿತಾಗುತ್ತದೆ ಎಂಬ ನಂಬಿಕೆಯಿಂದ ಹಲವು ರಾಜಕೀಯ ನಾಯಕರು ಹಾಗೂ ಜನಪ್ರಿಯ ವ್ಯಕ್ತಿಗಳು ಈ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಹೀಗಾಗಿ ಜುಲೈ 29 ರಂದು ದೇವಾಲಯಕ್ಕೆ ತೆರಳಿದ ವಸುಂದರಾ ರಾಜೇ ಜುಲೈ 31 ರವೆರಗೂ ಮಾ ಪಿತಾಂಬರ ದೇವಾಲಯದಲ್ಲೇ ಉಳಿದುಕೊಂಡಿದ್ದರು. ಜುಲೈ 31 ರ ಗುರು ಪೂರ್ಣಿಮೆಯಂದು ವಿಶೇಷ ಪೂಜೆ ಸಲ್ಲಿಸಿದ ನಂತರ ರಾಜಸ್ತಾನಕ್ಕೆ ವಸುಂದರಾ ರಾಜೇ ವಾಪಸಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT