ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿ 
ದೇಶ

ಡಾ.ಬಿ.ಆರ್ ಅಂಬೇಡ್ಕರ್ ಜಾತಿ ನಿರ್ಮೂಲನದ ಕನಸು ಇನ್ನೂ ಈಡೇರಿಲ್ಲ : ರಾಹುಲ್

ದೇಶದಲ್ಲಿ ದಲಿತರು ಸೇರಿದಂತೆ ಕೆಲ ವರ್ಗಗಳ ಜನರನ್ನು ಅವರ ಹಕ್ಕುಗಳಿಂದ ದೂರ ಇಟ್ಟಿರುವುದರಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಾತಿ ನಿರ್ಮೂಲನಾ

ಮಾಹೌ: ದೇಶದಲ್ಲಿ ದಲಿತರು ಸೇರಿದಂತೆ ಕೆಲ ವರ್ಗಗಳ ಜನರನ್ನು ಅವರ ಹಕ್ಕುಗಳಿಂದ ದೂರ ಇಟ್ಟಿರುವುದರಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಾತಿ ನಿರ್ಮೂಲನಾ ಕನಸು ಇನ್ನೂ ಅಪೂರ್ಣವಾಗಿದ್ದು, ಅದು ಈಡೇರಲು ಸಾಧ್ಯವಾಗಿಲ್ಲ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮೌಹಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಅಂಬೇಡ್ಕರ್ ಅವರ ಆಸೆಯನ್ನು ಈಡೇರಿಸುವುದು ನನ್ನ ಕರ್ತವ್ಯ ನಿಮ್ಮ ಹಾಗೂ ಎಲ್ಲರ ಕರ್ತವ್ಯ ಎಂದು ಹೇಳಿದರು.

ಇನ್ನು ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ , ಮದ್ರಾಸ್ ಐಐಟಿಯಲ್ಲಿ ವಿದ್ಯಾರ್ಥಿ ಸಂಘಟನೆಗೆ ನಿಷೇಧ ಹೇರಿದ್ದು ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದೆ. ಆ ಸಂಘಟನೆಯಲ್ಲಿ ದಲಿತರು ಪ್ರಮುಖ ಸದಸ್ಯರಾಗಿದ್ದರು ಹೀಗಾಗಿ ಆ ಸಂಘಟನೆಗೆ ನಿಷೇಧ ಹೇರಲಾಗಿದೆ ಎಂದು ದೂರಿದರು.

ಸಂವಿಧಾನ ರಚನೆಯಾಗಿ ಹಲವು ವರ್ಷಗಳೇ ಕಳೆದಿದ್ದರೂ ಇನ್ನೂ ದೇಶದಲ್ಲಿ ಜಾತಿ ವ್ಯವಸ್ಥೆ ಕಂಡುಬರುತ್ತಿರುವುದು ವಿಷಾಧನೀಯ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT