ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿ 
ದೇಶ

ಡಾ.ಬಿ.ಆರ್ ಅಂಬೇಡ್ಕರ್ ಜಾತಿ ನಿರ್ಮೂಲನದ ಕನಸು ಇನ್ನೂ ಈಡೇರಿಲ್ಲ : ರಾಹುಲ್

ದೇಶದಲ್ಲಿ ದಲಿತರು ಸೇರಿದಂತೆ ಕೆಲ ವರ್ಗಗಳ ಜನರನ್ನು ಅವರ ಹಕ್ಕುಗಳಿಂದ ದೂರ ಇಟ್ಟಿರುವುದರಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಾತಿ ನಿರ್ಮೂಲನಾ

ಮಾಹೌ: ದೇಶದಲ್ಲಿ ದಲಿತರು ಸೇರಿದಂತೆ ಕೆಲ ವರ್ಗಗಳ ಜನರನ್ನು ಅವರ ಹಕ್ಕುಗಳಿಂದ ದೂರ ಇಟ್ಟಿರುವುದರಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಾತಿ ನಿರ್ಮೂಲನಾ ಕನಸು ಇನ್ನೂ ಅಪೂರ್ಣವಾಗಿದ್ದು, ಅದು ಈಡೇರಲು ಸಾಧ್ಯವಾಗಿಲ್ಲ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮೌಹಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಅಂಬೇಡ್ಕರ್ ಅವರ ಆಸೆಯನ್ನು ಈಡೇರಿಸುವುದು ನನ್ನ ಕರ್ತವ್ಯ ನಿಮ್ಮ ಹಾಗೂ ಎಲ್ಲರ ಕರ್ತವ್ಯ ಎಂದು ಹೇಳಿದರು.

ಇನ್ನು ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ , ಮದ್ರಾಸ್ ಐಐಟಿಯಲ್ಲಿ ವಿದ್ಯಾರ್ಥಿ ಸಂಘಟನೆಗೆ ನಿಷೇಧ ಹೇರಿದ್ದು ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದೆ. ಆ ಸಂಘಟನೆಯಲ್ಲಿ ದಲಿತರು ಪ್ರಮುಖ ಸದಸ್ಯರಾಗಿದ್ದರು ಹೀಗಾಗಿ ಆ ಸಂಘಟನೆಗೆ ನಿಷೇಧ ಹೇರಲಾಗಿದೆ ಎಂದು ದೂರಿದರು.

ಸಂವಿಧಾನ ರಚನೆಯಾಗಿ ಹಲವು ವರ್ಷಗಳೇ ಕಳೆದಿದ್ದರೂ ಇನ್ನೂ ದೇಶದಲ್ಲಿ ಜಾತಿ ವ್ಯವಸ್ಥೆ ಕಂಡುಬರುತ್ತಿರುವುದು ವಿಷಾಧನೀಯ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT