ಏರ್ ಇಂಡಿಯಾ ಸಿಬ್ಬಂದಿಗೆ ಯೋಗಾಭ್ಯಾಸ 
ದೇಶ

ಏರ್‍ಇಂಡಿಯಾ ಹೊಸ ಸಿಬ್ಬಂದಿ, ಪೈಲಟ್‍ಗಳಿಗೆ ಕಡ್ಡಾಯ ಯೋಗ

ಯೋಗಾಭಿಮಾನಿಯಾದ ಪ್ರಧಾನಿ ನರೇಂದ್ರ ಮೋದಿ ಅವರು ಯೋಗದ ಬಗೆಗಿನ ತಮ್ಮ ಒಲವನ್ನು ಈಗ ಏರ್‍ಇಂಡಿಯಾದ ಪೈಲಟ್‍ಗಳಿಗೂ ಹಸ್ತಾಂತರಿಸಿದ್ದಾರೆ.

ನವದೆಹಲಿ: ಯೋಗಾಭಿಮಾನಿಯಾದ ಪ್ರಧಾನಿ ನರೇಂದ್ರ ಮೋದಿ ಅವರು ಯೋಗದ ಬಗೆಗಿನ ತಮ್ಮ ಒಲವನ್ನು ಈಗ ಏರ್‍ಇಂಡಿಯಾದ ಪೈಲಟ್‍ಗಳಿಗೂ ಹಸ್ತಾಂತರಿಸಿದ್ದಾರೆ.

ಜೂ.21 ಅನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾಗೆ ಹೊಸದಾಗಿ ಆಯ್ಕೆಯಾದ ಸಿಬ್ಬಂದಿಗೆ ಯೋಗಾಭ್ಯಾಸ ಕಡ್ಡಾಯ ಮಾಡಲಾಗಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಸದ್ಯ ತರಬೇತಿ ಪಡೆಯುತ್ತಿರುವ ಪೈಲಟ್ ಗಳು ಮತ್ತು ವಿಮಾನ ಸಿಬ್ಬಂದಿ ಸೋಮವಾರದಿಂದ ಪ್ರತಿದಿನ ಬೆಳಗ್ಗೆ 6.30ಕ್ಕೆ ಯೋಗ ಮಾಡಲೇಬೇಕು ಎಂದು ಸೂಚಿಸಲಾಗಿದೆ. ಒತ್ತಡವನ್ನು ನಿಯಂತ್ರಿಸಲು ಇದು ನೆರವಾಗಲಿದೆ ಎನ್ನುವುದು ವೈಮಾನಿಕ ಸಂಸ್ಥೆಯ ಅಭಿಪ್ರಾಯ. ಏರ್‍ಇಂಡಿಯಾವು ಇಂತಹುದೊಂದು ಕ್ರಮಕ್ಕೆ ಮುಂದಾಗಿರುವುದು ಇದೇ ಮೊದಲು.

ಇತ್ತೀಚೆಗಷ್ಟೇ ಸಂಸ್ಥೆಯು 300 ಸಿಬ್ಬಂದಿ ಮತ್ತು 78 ಪೈಲಟ್‍ಗಳನ್ನು ನೇಮಕ ಮಾಡಿದ್ದು, ಅವರಿಗೆ ಹೈದರಾಬಾದ್ ನಲ್ಲಿರುವ ಏರ್‍ಇಂಡಿಯಾ ಕೇಂದ್ರೀಯ ತರಬೇತಿ ಸಂಸ್ಥೆಯಲ್ಲಿ ತರಬೇತಿ ನೀಡಲಾಗುತ್ತಿದೆ. ಇದೇ ವೇಳೆ, ಜನರಲ್ ಮ್ಯಾನೇಜರ್ ಸೇರಿದಂತೆ ಏರ್‍ಇಂಡಿಯಾದ ಹಿರಿಯ ಅಧಿಕಾರಿಗಳಿಗೆ ಬೆಂಗಳೂರಿನಲ್ಲಿರುವ ಆರ್ಟ್ ಆಫ್ ಲಿವಿಂಗ್‍ನಲ್ಲಿ 2 ದಿನಗಳ ಕಾರ್ಯಾಗಾರವನ್ನೂ ಏರ್ಪಡಿಸಲಾಗಿದೆ.

ಪ್ರಧಾನಿ ನೇತೃತ್ವದಲ್ಲಿ ಸಾಮೂಹಿಕ ಯೋಗ ಈ ನಡುವೆ, ಜೂ.21ರಂದು ನವದೆಹಲಿಯಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಯೋಗಾಭ್ಯಾಸ
ಮಾಡಲಿದ್ದಾರೆ. ಬೆಳಗ್ಗೆ 7 ಗಂಟೆಗೆ ಈ 35 ನಿಮಿಷಗಳ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಯಲಿದ್ದು, 35 ಸಾವಿರ  ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಇದರಲ್ಲಿ ಪಾಲ್ಗೊಳ್ಳುವಂತೆ ಹಿರಿಯ ನಾಗರಿಕ ಸೇವಾ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಜತೆಗೆ, ಸೂಕ್ತ ಯೋಗಾಸನಗಳನ್ನು ಮಾಡಲು ನೆರವಾಗುವಂತೆ ಈಗಾಗಲೇ ಸರ್ಕಾರಿ ಅಧಿಕಾರಿಗಳಿಗೆ ತರಬೇತಿ ಡಿವಿಡಿಗಳು ಮತ್ತು ಪುಸ್ತಿಕೆಗಳನ್ನು ಕಳುಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT