ರಾಧ ಮೋಹನ್ ಸಿಂಗ್ 
ದೇಶ

ಮಳೆ ಅಭಾವ ಎದುರಿಸಲು ಸರ್ಕಾರ ಸಿದ್ಧ: ರಾಧ ಮೋಹನ್ ಸಿಂಗ್

ಕೃಷಿ ಬಿಕ್ಕಟ್ಟು, ರೈತರ ಆತ್ಮಹತ್ಯೆಯಂತಹ ಸಮಸ್ಯೆಗಳ ಜತೆಗೆ ಪ್ರಸಕ್ತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದ್ದು, ಬರಗಾಲ ಎದುರಾಗುವ ಸಾಧ್ಯತೆಯಿದ್ದು...

ನವದೆಹಲಿ: ಕೃಷಿ ಬಿಕ್ಕಟ್ಟು, ರೈತರ ಆತ್ಮಹತ್ಯೆಯಂತಹ ಸಮಸ್ಯೆಗಳ ಜತೆಗೆ ಪ್ರಸಕ್ತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದ್ದು, ಬರಗಾಲ ಎದುರಾಗುವ ಸಾಧ್ಯತೆಯಿದ್ದು, ಮಳೆ ಅಭಾವವನ್ನು ಎದುರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ರಾಧಾ ಮೋಹನ ಸಿಂಗ್‌ ತಿಳಿಸಿದ್ದಾರೆ.

ಕೇಂದ್ರ ಕೃಷಿ ಇಲಾಖೆಯ ಒಂದು ವರ್ಷದ ಸಾಧನೆಗಳನ್ನು ಹಂಚಿಕೊಳ್ಳಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಅಭಾವದಿಂದ ಉಂಟಾಗುವ ಆಹಾರ ಉತ್ಪಾದನೆಯ ಕೊರತೆ ಹಾಗೂ ನಂತರ ಎದುರಾಗಬಹುದಾದ ಆರ್ಥಿಕ ಪರಿಣಾಮಗಳನ್ನು ಎದುರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ‘ರಾಜ್ಯಗಳಿಂದ ಆಹಾರ ಉತ್ಪಾದನೆಯ ಮಾಹಿತಿಯನ್ನು ತರಿಸಿಕೊಳ್ಳಲಾಗುತ್ತಿದೆ. ಮಳೆ ಕೊರತೆ ಎದುರಿಸಲು ಸರ್ಕಾರ ಎಲ್ಲ ರೀತಿಯ ಸಿದ್ಧತೆ ನಡೆಸಿದೆ’ ಎಂದಿದ್ದಾರೆ.

ರೈತರ ಆದಾಯ ರಕ್ಷಣೆಯ ಉದ್ದೇಶದಿಂದ ಈ ವರ್ಷಾಂತ್ಯಕ್ಕೆ ಹೊಸ ಬೆಳೆ ವಿಮೆ ನೀತಿ ಜಾರಿಗೆ ತರಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಭಾರತದಲ್ಲಿ ಮಳೆಯ ಕಾರಣದಿಂದ ಕೃಷಿ ವಲಯದಲ್ಲಿ ಏರಿಳಿತ ಇದ್ದೇ ಇರುತ್ತದೆ. ಆದಾಗ್ಯೂ ನಮ್ಮ ನೀತಿಗಳ ಮೂಲಕ ನಷ್ಟದ ಪ್ರಮಾಣವನ್ನು ಆದಷ್ಟು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುರಹಂಕಾರ ಬಿಟ್ಟು ಕಾನೂನು ಪಾಲಿಸಿ: ಇಲ್ಲಿ ಶ್ರೀರಾಮನೇ ಲೆಕ್ಕ ಕೊಡಬೇಕು, ಇನ್ನು ರಾಮನ ಹೆಸ್ರಲ್ಲಿ ರಾಜಕೀಯ ಮಾಡಿದವರು ಕೊಡಬಾರ್ದಾ?

ಮಾವಿನ ಹಣ್ಣು ತಿಂದು ಸಹೋದರಿಯರ ಸಾವು ಕೇಸ್: ಕುಟುಂಬದ ಹೆಣ್ಣು ಮಕ್ಕಳನ್ನು ದತ್ತು ಪಡೆದ ಮಾಜಿ ಸಚಿವ ಪ್ರಭು ಚವ್ಹಾಣ್

Fact Check: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಪ್ರತಿಕ್ರಿಯೆ ವಿಡಿಯೋ ಫೇಕ್; ಗೃಹ ಸಚಿವರಿಂದಲೇ ಫ್ಯಾಕ್ಟ್ ಚೆಕ್

'ಸೈಲೆಂಟ್ ಮೋಡ್'ನಿಂದ ಯಾವಾಗ ಹೊರಬರುತ್ತೀರಿ? ಯಾಕೀ ದಿವ್ಯ ಮೌನ?: ಸಿಎಂ ವಿಜಯ್‌ಗೆ ಸ್ಟಾಲಿನ್ ಪ್ರಶ್ನೆ

ಇರಾನ್ ಸಂಘರ್ಷ ಅಂತ್ಯ; ಸತತ 3ನೇ ದಿನವೂ Indian Stock Market ಏರಿಕೆ, 24 ಸಾವಿರ ಅಂಕ ಗಡಿಯತ್ತ Nifty50

SCROLL FOR NEXT