ಸೋಮನಾಥ ದೇವಾಲಯ 
ದೇಶ

ಹಿಂದೂಗಳಲ್ಲದವರು ದೇವಾಲಯ ಪ್ರವೇಶಕ್ಕೆ ವಿಶೇಷ ಅನುಮತಿ ಪಡೆಯಬೇಕು: ಸೋಮನಾಥ ಟ್ರಸ್ಟ್

ಹಿಂದೂಗಳಲ್ಲದವರು ಇನ್ನು ಮುಂದೆ ಗುಜರಾತ್ ನ ಸೋಮನಾಥ ದೇವಾಲಯ ಪ್ರವೇಶಿಸಲು ವಿಶೇಷ ಅನುಮತಿ ಪಡೆಯಬೇಕು....

ಅಹಮದಾಬಾದ್: ಹಿಂದೂಗಳಲ್ಲದವರು ಇನ್ನು ಮುಂದೆ ಗುಜರಾತ್ ನ ಸೋಮನಾಥ ದೇವಾಲಯ ಪ್ರವೇಶಿಸಲು ವಿಶೇಷ ಅನುಮತಿ ಪಡೆಯಬೇಕು ಎಂದು ಸೋಮನಾಥದೇವಾಲಯ ಟ್ರಸ್ಟ್ ತಿಳಿಸಿದೆ.

ದೇವಾಲಯ ಪ್ರವೇಶಿಸಲು ಕಾರಣ ಹಾಗೂ ವಿವರಗಳನ್ನು ನೀಡಿ ಸ್ಥಳೀಯ ನಾಗರಿಕ ಅಧಿಕಾರಿಗಳಿಂದ ಅನುಮತಿ ಪಡೆಯುವಂತೆ ಟ್ರಸ್ಟ್ ಸೂಚಿಸಿದೆ.
ದಕ್ಷಿಣ ಭಾರತದ ಅನೇಕ ದೇವಾಲಯಗಳಲ್ಲಿ ಇಂಥ ನಿಯಮ ಜಾರಿಯಲ್ಲಿವೆ. ಆದರೆ ಈಗ ಗುಜರಾತ್ ನಲ್ಲಿ ಈ ರೀತಿಯ ನಿಯಮ ಜಾರಿಗೆ ತರಲು ಉದ್ದೇಶಿಸಿರುವುದರಿಂದ ಈ ವಿಷಯ ವಿವಾದ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ಮುಖಂಡ ಎಲ್.ಕೆ ಆಡ್ವಾಣಿ, ಕೇಶುಬಾಯಿ ಪಟೇಲ್ ಸೇರಿದಂತೆ ಹಲವು ಬಿಜೆಪಿ ನಾಯಕರುಗಳು ಸೋಮನಾಥ ದೇವಾಲಯ ಟ್ರಸ್ಟ್ ನ ಸದಸ್ಯರಾಗಿದ್ದಾರೆ.

ದೇಶದ 12 ಪುರಾತನ ಈಶ್ವರನ ದೇವಾಲಯಗಳಲ್ಲಿ ಗುಜರಾತ್ ನ ಸೋಮನಾಥ ದೇವಾಲಯವೂ ಒಂದಾಗಿದೆ. ಮುಸ್ಲಿಂ ಆಕ್ರಮಣಕಾರರು ದಂಡೆತ್ತಿ ಬಂದು ದೇವಾಲಯವನ್ನು ಧ್ವಂಸಗೊಳಿಸುತ್ತಿದ್ದರು. ಪ್ರತಿ ಭಾರಿಯೂ ಅದೇ ಜಾಗದಲ್ಲಿ ದೇವಾಲಯವನ್ನು ಪುನರ್ ನಿರ್ಮಾಣ ಮಾಡಲಾಗುತ್ತಿತ್ತು.

ಈಗ ಇರುವ ದೇವಾಲಯವನ್ನು 5 ವರ್ಷಗಳ ಅವಧಿಯಲ್ಲಿ ನಿರ್ಮಿಸಲಾಗಿದ್ದು, 1947 ರಿಂದ 1957 ರ ವರೆಗೂ ದೇವಾಲಯ ನಿರ್ಮಾಣ ಮಾಡಲು ಸಮಯ ತೆಗೆದುಕೊಂಡಿತು. ಅಂದಿನ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಈ ದೇವಾಲಯವನ್ನು ಉದ್ಘಾಟಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT