ಭೂಮಿ ಪೂಜೆ ನೆರವೇರಿಸಿದ ಸಿಎಂ ಚಂದ್ರಬಾಬು ನಾಯ್ಡು 
ದೇಶ

'ಅಮರಾವತಿ'ಗೆ ಭೂಮಿ ಪೂಜೆ

ವಿಭಜಿತ ಆಂಧ್ರ ಪ್ರದೇಶ ರಾಜ್ಯದ ನೂತನ ರಾಜಧಾನಿಯಾಗಿ ಆಯ್ಕೆಯಾಗಿರುವ ಅಮರಾತಿ ನಿರ್ಮಾಣಕ್ಕೆ ಶನಿವಾರ ಆಂಧ್ರ ಪ್ರದೇಶ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರು ಭೂಮಿ ಪೂಜೆ...

ವಿಜಯವಾಡ: ವಿಭಜಿತ ಆಂಧ್ರ ಪ್ರದೇಶ ರಾಜ್ಯದ ನೂತನ ರಾಜಧಾನಿಯಾಗಿ ಆಯ್ಕೆಯಾಗಿರುವ ಅಮರಾತಿ ನಿರ್ಮಾಣಕ್ಕೆ ಶನಿವಾರ ಆಂಧ್ರ ಪ್ರದೇಶ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರು ಭೂಮಿ ಪೂಜೆ ನೆರವೇರಿಸಿದರು.

ಗುಂಟೂರು ಜಿಲ್ಲೆಯಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಮಂಡದಮ್ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಅವರ ಪತ್ನಿ ಭುವನೇಶ್ವರಿ ಹಾಗೂ ಅವರ ಪುತ್ರ ಲೋಕೇಶ್ ಅವರು ಪಾಲ್ಗೊಂಡಿದ್ದರು. ಶನಿವಾರ ಬೆಳಗ್ಗೆ ಸುಮಾರು 8.49ರ ಮುಹೂರ್ತದಲ್ಲಿ ಚಂದ್ರಬಾಬು ನಾಯ್ಡು ಅವರು ನೂತನ ರಾಜಧಾನಿ ಅಮರಾವತಿಗೆ ಭೂಮಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖ ಕೇಂದ್ರ ಸಚಿವರು, ರಾಜ್ಯ ಸಚಿವರು ಮತ್ತು ಶಾಸಕರು ಸೇರಿದಂತೆ ಆಂಧ್ರ ಪ್ರದೇಶದ ಕೆಲ ಹಿರಿಯ ಅಧಿಕಾರಿಗಳು ಸೇರಿದಂತೆ ತೆಲುಗು ದೇಶಂ ಪಕ್ಷದ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, "ಈ ದಿನ ಆಂಧ್ರ ಪ್ರದೇಶದ ಇತಿಹಾಸದಲ್ಲಿ ಐತಿಹಾಸಿಕ ದಿನವಾಗಿದೆ. ದೇಶದ ಇತಿಹಾಸದಲ್ಲಿಯೇ ಪ್ರಮುಖ ನಗರವೊಂದು ಜನ್ಮ ತಳೆಯುತ್ತಿದ್ದು, ಭವಿಷ್ಯದಲ್ಲಿ ದೇಶದ ವಾಣಿಜ್ಯ ರಾಜಧಾನಿಯಾಗಲಿದೆ" ಎಂದು ಹೇಳಿದರು. ಅಲ್ಲದೆ "5 ಕೋಟಿ ತೆಲುಗು ಭಾಷಿಕರ ಉತ್ತಮ ಭವಿಷ್ಯಕ್ಕೆ ನಾಂದಿ ಹಾಡಲಿದೆ. ಭವಿಷ್ದ ರಾಜಧಾನಿ ದೇಶದ ಪ್ರವಾಸೋಧ್ಯಮ ಕೇಂದ್ರವಾಗಿರಲಿದ್ದು, ಉದ್ಯೋಗಾವಕಾಶದ ಕೇಂದ್ರಬಿಂದುವಾಗಿರಲಿದೆ ಎಂದು ಹೇಳಿದರು. ಒಟ್ಟಾರೆ ವಿಭಜಿತ ಆಂಧ್ರ ಪ್ರದೇಶದ ನೂತನ ರಾಜಧಾನಿ ನಿರ್ಮಾಣಕ್ಕೆ ಇಂದು ಅಧಿಕೃತವಾಗಿ ಶಂಕುಸ್ಥಾಪನೆ ನೆರವೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

NIRF ರ‍್ಯಾಂಕಿಂಗ್‌: ಸತತ 7ನೇ ವರ್ಷವೂ ಐಐಟಿ ಮದ್ರಾಸ್ ಗೆ ಅಗ್ರಸ್ಥಾನ; IISc ಬೆಂಗಳೂರಿಗೆ 2ನೇ ಸ್ಥಾನ

SCO Summit 2025: ಬೀಜಿಂಗ್‌, ಮಾಸ್ಕೋ ಮತ್ತು ವಾಷಿಂಗ್ಟನ್‌ ನಡುವೆ ಭಾರತದ ಜಾಗರೂಕ ನಡಿಗೆ (ಜಾಗತಿಕ ಜಗಲಿ)

SCROLL FOR NEXT