ಭೂಕುಸಿತದಿಂದ ಉಂಟಾದ ಹಾನಿ 
ದೇಶ

ಅರುಣಾಚಲಪ್ರದೇಶದಲ್ಲಿ ಸತತ ಮಳೆ- ಭೂಕುಸಿತ, ಅಪಾರ ಹಾನಿ

ಅರುಣಾ ಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಭೂಕುಸಿತವುಂಟಾಗಿದೆ....

ಇಟಾನಗರ್: ಅರುಣಾ ಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಭೂಕುಸಿತವುಂಟಾಗಿ ಅನೇಕ ಮನೆಗಳಿಗೆ ಹಾನಿಯಾಗಿದೆ.  ಕಳೆದ 24 ಗಂಟೆಗಳಲ್ಲಿ ಸುಮಾರು 100 ಮಿಲಿಮೀಟರ್ ಮಳೆಯಾಗಿದೆ ಎಂದು ಕೇಂದ್ರ ಜಲ ಆಯೋಗ ತಿಳಿಸಿದೆ.

ಭೂಕುಸಿತದಿಂದಾಗಿ ನಿಯಾ ಕಾಲೋನಿಯಲ್ಲಿ ಅನೇಕ ಮನೆಗಳು ಕುಸಿದು ಬಿದ್ದಿವೆ. ರಾಷ್ಟ್ರೀಯ ಹೆದ್ದಾರಿ 52 ಸೇರಿದಂತೆ ಇಟಾ ನಗರ್ ಹಾಗೂ ಕರಿಂಗಶ್ ನಗರದಲ್ಲೂ ಕೂಡ ಹಲವು ಮನೆಗಳು ಹಾನಿಗೊಳಗಾಗಿವೆ,  ಪ್ರಮುಖ ರಸ್ತೆಗಳ ಸಂಪರ್ಕ ಕಡಿದು ಹೋಗಿದೆ. ಭೂ ಕುಸಿತದಿಂದ ಸಂಚಾರ ಸ್ಥಗಿತಗೊಂಡಿದ್ದು, ತೆರವುಗೊಳಿಸಲು ರಕ್ಷಣಾ ಪಡೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಮಣ್ಣಿನೊಳಗೆ 5 ವಾಹನಗಳು ಹೂತುಹೋಗಿದ್ದು ಸುಮಾರು 57 ಮನೆಗಳು ಕುಸಿದು ಬೀಳುವ ಆತಂಕದಲ್ಲಿವೆ. ಇನ್ನು ಜೂನ್ 7 ರಿಂದ 11 ರವರೆಗೆ ಮಳೆ ಮುಂದುವರಿಯಲಿದೆ ಎಂದು ಇಟಾನಗರ ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT