ಭೂಕುಸಿತದಿಂದ ಉಂಟಾದ ಹಾನಿ 
ದೇಶ

ಅರುಣಾಚಲಪ್ರದೇಶದಲ್ಲಿ ಸತತ ಮಳೆ- ಭೂಕುಸಿತ, ಅಪಾರ ಹಾನಿ

ಅರುಣಾ ಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಭೂಕುಸಿತವುಂಟಾಗಿದೆ....

ಇಟಾನಗರ್: ಅರುಣಾ ಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಭೂಕುಸಿತವುಂಟಾಗಿ ಅನೇಕ ಮನೆಗಳಿಗೆ ಹಾನಿಯಾಗಿದೆ.  ಕಳೆದ 24 ಗಂಟೆಗಳಲ್ಲಿ ಸುಮಾರು 100 ಮಿಲಿಮೀಟರ್ ಮಳೆಯಾಗಿದೆ ಎಂದು ಕೇಂದ್ರ ಜಲ ಆಯೋಗ ತಿಳಿಸಿದೆ.

ಭೂಕುಸಿತದಿಂದಾಗಿ ನಿಯಾ ಕಾಲೋನಿಯಲ್ಲಿ ಅನೇಕ ಮನೆಗಳು ಕುಸಿದು ಬಿದ್ದಿವೆ. ರಾಷ್ಟ್ರೀಯ ಹೆದ್ದಾರಿ 52 ಸೇರಿದಂತೆ ಇಟಾ ನಗರ್ ಹಾಗೂ ಕರಿಂಗಶ್ ನಗರದಲ್ಲೂ ಕೂಡ ಹಲವು ಮನೆಗಳು ಹಾನಿಗೊಳಗಾಗಿವೆ,  ಪ್ರಮುಖ ರಸ್ತೆಗಳ ಸಂಪರ್ಕ ಕಡಿದು ಹೋಗಿದೆ. ಭೂ ಕುಸಿತದಿಂದ ಸಂಚಾರ ಸ್ಥಗಿತಗೊಂಡಿದ್ದು, ತೆರವುಗೊಳಿಸಲು ರಕ್ಷಣಾ ಪಡೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಮಣ್ಣಿನೊಳಗೆ 5 ವಾಹನಗಳು ಹೂತುಹೋಗಿದ್ದು ಸುಮಾರು 57 ಮನೆಗಳು ಕುಸಿದು ಬೀಳುವ ಆತಂಕದಲ್ಲಿವೆ. ಇನ್ನು ಜೂನ್ 7 ರಿಂದ 11 ರವರೆಗೆ ಮಳೆ ಮುಂದುವರಿಯಲಿದೆ ಎಂದು ಇಟಾನಗರ ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ