ಸೋಮವಾರ ಬ್ಲಾಕೌಟ್ ಹಂತ ಪ್ರವೇಶಿಸಲಿರುವ ಮಂಗಳಯಾನ 
ದೇಶ

ಸೋಮವಾರದಿಂದ 'ಬ್ಲಾಕೌಟ್ ಹಂತ' ಕ್ಕೆ ಮಂಗಳಯಾನ

ಮಂಗಳಯಾನ ಇನ್ನು 15 ದಿನಗಳವರೆಗೆ ಭೂಮಿಯಿಂದ ತನ್ನ ಸಂಪರ್ಕ ಮತ್ತು ಸಂವಹನವನ್ನು ಕಡಿದುಕೊಳ್ಳುತ್ತದೆ...

ಬೆಂಗಳೂರು: ಇಸ್ರೋ ಕೇಂದ್ರದ ಮಹಾತ್ವಾಕಾಂಕ್ಷಿ ಯೋಜನೆಯಾದ ಮಂಗಳಯಾನ ಇನ್ನು 15 ದಿನಗಳವರೆಗೆ ಭೂಮಿಯಿಂದ ತನ್ನ ಸಂಪರ್ಕ ಮತ್ತು ಸಂವಹನವನ್ನು ಕಡಿದುಕೊಳ್ಳುತ್ತದೆ.

ಸೂರ್ಯ ಮತ್ತು ಮಂಗಳನ ಮಧ್ಯೆ ಭೂಮಿ   ಅಡ್ಡ ಬರುವುದರಿಂದ ಉಪಗ್ರಹ ತನ್ನ ಸಂಪರ್ಕ ಕಡಿದುಕೊಂಡು ಕಪ್ಪು ಹಂತಕ್ಕೆ(ಬ್ಲಾಕೌಟ್) ಪ್ರವೇಶಿಸಿ ನಿರ್ದಿಷ್ಟ ಸ್ಥಾನಕ್ಕೆ ಹೋಗಿ ಕೂರುತ್ತದೆ. ನಾಳೆಯಿಂದ(ಜೂನ್ 8) ಈ ತಿಂಗಳ 22ರವರೆಗೆ ಉಪಗ್ರಹ ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧಿಕಾರಿ ತಿಳಿಸಿದ್ದಾರೆ.

ಮಂಗಳಯಾನ ನೌಕೆಯನ್ನು ಹಾರಿಸಿಬಿಟ್ಟ ನಂತರ ಇಷ್ಟೊಂದು ದೀರ್ಘ ಅವಧಿಯವರೆಗೆ ಸಂಪರ್ಕ ಕಡಿದುಕೊಳ್ಳುವುದು ಇದೇ ಮೊದಲು, ಈ ಅವಧಿಯಲ್ಲಿ ಉಹಗ್ರಹದ ಜೊತೆ ಯಾವುದೇ ಸಂವಹನ ಸಾಧ್ಯವಾಗುವುದಿಲ್ಲ. ನಂತರ,ಉಪಗ್ರಹವನ್ನು ಮತ್ತೆ ಹತೋಟಿಗೆ ತರಬಹುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂದಿನ ವರ್ಷ ಮೇ ತಿಂಗಳಲ್ಲಿ ಮತ್ತೆ ಇಂತಹ ಸ್ಥಿತಿ ಉಂಟಾಗಲಿದೆ.

ಇಸ್ರೋ ಬಾಹ್ಯಾಕಾಶ ಕೇಂದ್ರ, ಕಳೆದ ವರ್ಷ ಸೆಪ್ಟೆಂಬರ್ 24ರಂದು, ಅತಿ ಕಡಿಮೆ ವೆಚ್ಚದಲ್ಲಿ ಮಂಗಳಗ್ರಹದ ಕಕ್ಷೆಗೆ ಯಶಸ್ವಿಯಾಗಿ ಉಪಗ್ರಹವನ್ನು ಕಳುಹಿಸಿತ್ತು. ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಮಹತ್ವದ ಸಾಧನೆ ಮಾಡಿತ್ತು. ಮಂಗಳಯಾನ ಸಂಚಾರ ಅವಧಿಯನ್ನು  ಹೆಚ್ಚುವರಿ ಇಂಧನ ಕಾರಣದಿಂದ ಕಳೆದ ಮಾರ್ಚ್ ನಲ್ಲಿ  ಆರು ತಿಂಗಳವರೆಗೆ ವಿಸ್ತರಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT