ಮಣಿಪುರ ಚಾಂಡೆಲ್ ಜಿಲ್ಲೆಯಲ್ಲಿ ಗುರುವಾರ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟ ಯೋಧರ ಅಂತಿಮ ನಮನ ಅಧಿಕಾರಿಗಳು 
ದೇಶ

ನೋಯ್ಡಾ ಆಡಳಿತದ ವಿರುದ್ಧ ಕಿಡಿಕಾರಿದ ಮೃತ ಯೋಧನ ಕುಟುಂಬ

ಮಣಿಪುರ ಚಾಂಡೆಲ್ ಜಿಲ್ಲೆಯಲ್ಲಿ ಗುರುವಾರ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟ ಯೋಧರ ಅಂತಿಮ ನಮನಕ್ಕೆ ರಾಜಕೀಯ ಗಣ್ಯರು ಆಗಮಿಸದಿರುವ ಕುರಿತಂತೆ ಮೃತ ಯೋಧರ ಕುಟುಂಬಗಳು ಕಿಡಿಕಾರಿದ್ದು, ಅಂತಿಮ ಸಂಸ್ಕಾರ ನಡೆಸಲು ತಿರಸ್ಕರಿಸಿದೆ ಎಂದು ತಿಳಿಬಂದಿದೆ...

ನವದೆಹಲಿ: ಮಣಿಪುರ ಚಾಂಡೆಲ್ ಜಿಲ್ಲೆಯಲ್ಲಿ ಗುರುವಾರ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟ ಯೋಧರ ಅಂತಿಮ ನಮನಕ್ಕೆ ರಾಜಕೀಯ ಗಣ್ಯರು ಆಗಮಿಸದಿರುವ ಕುರಿತಂತೆ ಮೃತ ಯೋಧರ ಕುಟುಂಬಗಳು ಕಿಡಿಕಾರಿದ್ದು, ಅಂತಿಮ ಸಂಸ್ಕಾರ ನಡೆಸಲು ತಿರಸ್ಕರಿಸಿದೆ ಎಂದು ತಿಳಿಬಂದಿದೆ.

ಮಣಿಪುರ ಚಾಂಡೆಲ್ ಜಿಲ್ಲೆಯಲ್ಲಿ ನಾಗಾ ಉಗ್ರರು ನಡೆಸಿದ ದಾಳಿಯಲ್ಲಿ 18 ಯೋಧರು ಸಾವನ್ನಪ್ಪಿದ್ದರು. ದಾಳಿಯಲ್ಲಿ ಹುತಾತ್ಮರಾದ ಯೋಧರ ದೇಹಗಳನ್ನು ಮಣಿಪುರ ರಾಜಧಾನಿ ಇಂಫಾಲಕ್ಕೆ ತಂದು ಅಂತಿಮ ಗೌರವ ಸಲ್ಲಿಸಲಾಗಿತ್ತು. ಯೋಧರ ಅಂತಿಮ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಸೇನೆಯ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳಷ್ಟೇ ಹಾಜರಿದ್ದರು. ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರು ಯಾರೊಬ್ಬರೂ ಹಾಜರಿರಲಿಲ್ಲ.

ನೋಯ್ಡಾ ಆಡಳಿತದ ಈ ಕ್ರಮವನ್ನು ದಾಳಿಯಲ್ಲಿ ಮೃತರಾದ ಜಗ್ವೀರ್ ಸಿಂಗ್ ಎಂಬ ಯೋಧನ ಕುಟುಂಬವು ತೀವ್ರವಾಗಿ ವಿರೋಧಿಸಿದ್ದು, ಯೋಧನ ದೇಹವನ್ನು ದಹನ ಮಾಡುವುದಿಲ್ಲ ಎಂದು ಹೇಳುತ್ತಿದೆ.

ಸರ್ಕಾರ ಮೃತ ಯೋಧರ ಕುಟುಂಬಕ್ಕೆ 30 ಲಕ್ಷ ಘೋಷಿಸಿದ್ದು ನಿಜ. ಆದರೆ, ಅದು ಮಾಧ್ಯಮಗಳ ಮುಂದೆ ಅಷ್ಟೇ. ಈವರೆಗೂ ಯಾವುದೇ ಅಧಿಕಾರಿಗಳು ಮೃತ ಯೋಧರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿಲ್ಲ. ಕನಿಷ್ಟ ಪಕ್ಷ ಯೋಧರ ಅಂತಿಮ ನಮನಕ್ಕೂ ಹಾಜರಿರಲಿಲ್ಲ. ಅಧಿಕಾರಿಗಳು ನಿಜಕ್ಕೂ ಪರಿಹಾರ ನೀಡಬೇಕು ಎಂಬ ಮನಸ್ಸಿದ್ದರೆ, ನಮ್ಮನ್ನು ಭೇಟಿಯಾಗಿ ಪರಿಹಾರ ನೀಡಲಿ ಎಂದು ಮೃತ ಯೋಧ ಜಗ್ವೀರ್ ಸಿಂಗ್ ಕುಟುಂಬಸ್ಥರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT