ಮದ್ರಾಸ್ ಐಐಟಿ ಶಿಕ್ಷಣ ಸಂಸ್ಥೆ 
ದೇಶ

ವಿದ್ಯಾರ್ಥಿ ಸಂಘಟನೆ ನಿಷೇಧ ಹಿಂಪಡೆದ ಮದ್ರಾಸ್ ಐಐಟಿ

ದಲಿತ ವಿದ್ಯಾರ್ಥಿ ಸಂಘಟನೆಯನ್ನು ನಿಷೇಧಿಸುವ ವಿವಾದಿತ ಕ್ರಮವನ್ನು ಮದ್ರಾಸ್ ಐಐಟಿ ಶಿಕ್ಷಣ ಸಂಸ್ಥೆ ಭಾನುವಾರ ಹಿಂಪಡೆದಿದೆ.

ಚೆನ್ನೈ: ದಲಿತ ವಿದ್ಯಾರ್ಥಿ ಸಂಘಟನೆಯನ್ನು ನಿಷೇಧಿಸುವ ವಿವಾದಿತ ಕ್ರಮವನ್ನು ಮದ್ರಾಸ್ ಐಐಟಿ ಶಿಕ್ಷಣ ಸಂಸ್ಥೆ ಭಾನುವಾರ ಹಿಂಪಡೆದಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಭಾನುವಾರ ಸಂಜೆ ಮದ್ರಾಸ್ ಐಐಟಿ ಶಿಕ್ಷಣ ಸಂಸ್ಥೆಯ ನಿರ್ದೇಶಕರ ಸಭೆ ನಡೆದಿದ್ದು, ಸಭೆಯಲ್ಲಿ ಅಂಬೇಡ್ಕರ್ ಪೆರಿಯಾರ್ ವಿದ್ಯಾರ್ಥಿ ಸಂಘಟನೆಯನ್ನು ನಿಷೇಧಿಸುವ ನಿರ್ಧಾರವನ್ನು ಹಿಂಪಡೆದುಕೊಳ್ಳವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಐಐಟಿ ಶಿಕ್ಷಣ ಸಂಸ್ಥೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ (ಎನ್ ಸಿಎಸ್ ಸಿ) ವಿವರ ನೀಡುವಂತೆ ನೋಟಿಸ್ ಕೂಡ ಜಾರಿಮಾಡಿತ್ತು.

ಅಲ್ಲದೆ ಮದ್ರಾಸ್ ಐಐಟಿಯ ಈ ನಿರ್ಧಾರ ತೀವ್ರ ಟೀಕೆಗೂ ಒಳಗಾಗಿತ್ತು. ವಿದ್ಯಾರ್ಥಿಪರ ಸಂಘಟನೆಗಳು ಮದ್ರಾಸ್ ಐಐಟಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಸತತ ಒಂದು ವಾರದಿಂದ ತೀವ್ರ ಹೋರಾಟ ನಡೆಸಿದ್ದವು. ಅಂತಿಮವಾಗಿ ಅಂಬೇಡ್ಕರ್ ಪೆರಿಯಾರ್ ವಿದ್ಯಾರ್ಥಿ ಸಂಘಟನೆಯ ಮಾನ್ಯತೆ ರದ್ದು ಮಾಡುವ ಕ್ರಮವನ್ನು ಮದ್ರಾಸ್ ಐಐಟಿ ಹಿಂಪಡೆದಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಕಾರ್ಯವೈಖರಿಯನ್ನು ಬಹಿರಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದರು ಹಿನ್ನಲೆಯಲ್ಲಿ ಮದ್ರಾಸ್ ಐಐಟಿ ನೀತಿ ಸಂಹಿತೆಯನ್ನು ಮೀರಿದ ನೆಪವೊಡ್ಡಿ ಅಂಬೇಡ್ಕರ್ ಪೆರಿಯಾರ್ ವಿದ್ಯಾರ್ಥಿ ಸಂಘಟನೆಯ ಮಾನ್ಯತೆಯನ್ನು ರದ್ದುಗೊಳಿಸಲಾಗಿತ್ತು. ಮದ್ರಾಸ್ ಐಐಟಿಯ ಈ ವಿವಾದಾತ್ಮಕ ನಿರ್ಧಾರ ದೇಶಾದ್ಯಂತ ತೀವ್ರ ಟೀಕೆಗೆ ಗುರಿಯಾಗಿತ್ತು. ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಈ ನಿರ್ಧಾರವನ್ನು ಖಂಡಿಸಿದ್ದೇ ಅಲ್ಲದೇ ಮದ್ರಾಸ್ ಐಐಟಿ ಆವರಣದಲ್ಲಿ ಮತ್ತು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರ ದೆಹಲಿ ನಿವಾಸದ ಎದುರೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India vs South Africa: ತವರಿನಲ್ಲಿ ಮತ್ತೊಮ್ಮೆ ಭಾರತಕ್ಕೆ ವೈಟ್‌ವಾಶ್ ಮುಖಭಂಗ: ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಬವುಮಾ ಪಡೆ!

‘ಭಾರತದ ಒಂದೇ ಜಿಲ್ಲೆಗೆ 2,20,000 H-1B ವೀಸಾ ಮಂಜೂರು’: ದೊಡ್ಡ ಪ್ರಮಾಣದ ಹಗರಣ, ಯುಎಸ್ ಅರ್ಥಶಾಸ್ತ್ರಜ್ಞ ಡಾ.ಡೇವ್ ಬ್ರಾಟ್ ಆರೋಪ

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಜನಸ್ನೇಹಿ ಅಧಿಕಾರಿ ಪ್ರಾಣ ಕಸಿದ ಶ್ವಾನ: ಮುಗಿಲು ಮುಟ್ಟಿದ ಬೀಳಗಿ ಕುಟುಂಬಸ್ಥರ ಆಕ್ರಂದನ; ಬಡತನದಲ್ಲಿ ಅರಳಿದ್ದ ಧೀಮಂತ ಪ್ರತಿಭೆ

SCROLL FOR NEXT