ವಾರಣಾಸಿ ತ್ಯಾಜ್ಯ ಘಟಕದಲ್ಲಿ ಸ್ಪೋಟ (ಸಾಂದರ್ಭಿಕ ಚಿತ್ರ) 
ದೇಶ

ವಾರಣಾಸಿ ತ್ಯಾಜ್ಯ ಘಟಕದಲ್ಲಿ ಸ್ಪೋಟ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರ ವಾರಣಾಸಿಯ ಇರಿಗೇಷನ್ ಕಾಲೋನಿಯಲ್ಲಿ ಸ್ಪೋಟವೊಂದು ಸಂಭವಿಸಿರುವುದಾಗಿ ಸೋಮವಾರ ತಿಳಿದುಬಂದಿದೆ....

ಲಖನೌ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರ ವಾರಣಾಸಿಯ ಇರಿಗೇಷನ್ ಕಾಲೋನಿಯಲ್ಲಿ ಸ್ಪೋಟವೊಂದು ಸಂಭವಿಸಿರುವುದಾಗಿ ಸೋಮವಾರ ತಿಳಿದುಬಂದಿದೆ.

ವಾರಣಾಸಿಯಲ್ಲಿರುವ ಇರಿಗೇಷನ್ ಕಾಲೋನಿಯ ತ್ಯಾಜ್ಯ ಘಟಕದಲ್ಲಿ ಇಂದು ಬೆಳಿಗ್ಗೆ ಸ್ಫೋಟವೊಂದು ಸಂಭವಿಸಿದ್ದು, ಘಟನೆಯಲ್ಲಿ ಸಾವು, ನೋವು ಸಂಭವಿಸಿರುವುದಾಗಿ ವರದಿಯಾಗಿಲ್ಲ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಪೋಟದಿಂದ ಗಾಬರಿಯಾಗುವ ಅಗತ್ಯವಿಲ್ಲ. ಸ್ಪೋಟಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ತನಿಖೆ ಮುಂದುವರೆಯುತ್ತಿದ್ದು, ತನಿಖೆಯ ನಂತರವಷ್ಟೇ ಪ್ರಮುಖ ಕಾರಣ ತಿಳಿದು ಬರಲಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತ್ಯಾಜ್ಯ ಘಟಕದಲ್ಲಿ ರಾಸಾಯನಿಕ ಪದಾರ್ಥ ಅಥವಾ ಕಸದ ಕೆಳಗೆ ಇತರೆ ತಾಪದ ವಸ್ತುಗಳಿರುವುದರಿಂದ ಸ್ಫೋಟ ಸಂಭವವಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT