ನಿತೀಶ್ ಕುಮಾರ್ 
ದೇಶ

ನಿತೀಶ್ ಕುಮಾರ್ ಸಿಎಂ ಅಭ್ಯರ್ಥಿ

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಜೆಡಿ(ಯು)-ಆರ್ ಜೆಡಿ ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸೋಮವಾರ ಘೋಷಿಸಲಾಗಿದೆ...

ಪಾಟ್ನಾ:ಮುಂಬರುವ ಬಿಹಾರ ವಿಧಾನಸಭಾ  ಚುನಾವಣೆಗೆ  ಜೆಡಿ(ಯು)-ಆರ್ ಜೆಡಿ  ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ನಿತೀಶ್  ಕುಮಾರ್ ಅವರನ್ನು  ಸೋಮವಾರ ಘೋಷಿಸಲಾಗಿದೆ.

ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್  ಯಾದವ್ ಅವರ  ಸಮ್ಮುಖದಲ್ಲಿ  ಸಮಾಜವಾದಿ  ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನಿತೀಶ್  ಕುಮಾರ್ ಹೆಸರನ್ನು ಘೋಷಣೆ ಮಾಡಿದರು.

ಚುನಾವಣೆಯಲ್ಲಿ ಬಿಜೆಪಿಯನ್ನು  ಸೋಲಿಸುವುದು  ನಮ್ಮ ಗುರಿ. ಅದಕ್ಕಾಗಿ ನಾವು  ಒಟ್ಟು ಸೇರಿದ್ದೇವೆ. ನಿತೀಶ್  ಕುಮಾರ್ ಅವರ  ಜೊತೆ ಯಾವುದೇ  ಭಿನ್ನಾಭಿಪ್ರಾಯಗಳಿಲ್ಲ. ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ಆದುದರಿಂದ ನಾನು ಸಿಎಂ ಅಭ್ಯರ್ಥಿ  ಅಲ್ಲ ಎಂದು ಲಾಲು ಪ್ರಸಾದ್ ಯಾದವ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ  ನೀಡಿದರು.

ಹೆಸರು ಘೋಷಣೆಯಾದ ಕೆಲ ಹೊತ್ತಿನ  ಬಳಿಕ ಮಾತನಾಡಿದ  ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್ ಜೆಡಿ, ಜೆಡಿಯು ಮತ್ತು ಕಾಂಗ್ರೆಸ್ ಒಟ್ಟಿಗೆ ಚುನಾವಣೆಯನ್ನು ಎದುರಿಸಲಿವೆ.  ಆರ್ ಜೆಡಿ  ಮತ್ತು ಜೆಡಿಯು ಮೊದಲೇ ಒಂದಾಗಿದ್ದವು. ಅದಕ್ಕೆ ಈಗ ಕಾಂಗ್ರೆಸ್  ಹೊಸದಾಗಿ  ಸೇರ್ಪಡೆಯಾಗಿದೆ ಅಷ್ಟೆ ಎಂದು ತಿಳಿಸಿದರು.

ಲಾಲು ಪ್ರಸಾದ್  ಯಾದವ್ ಜೊತೆಗಿನ  ಭಿನ್ನಾಭಿಪ್ರಾಯಗಳ ಬಗ್ಗೆ ಇರುವ ವದಂತಿಯನ್ನು  ತಳ್ಳಿಹಾಕಿದ  ನಿತೀಶ್ ಕುಮಾರ್, ನಮ್ಮಿಬ್ಬರ  ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.

ಮೂರೂ ಪಕ್ಷಗಳು ನಾಳೆ ಪಾಟ್ನಾದಲ್ಲಿ ಸಭೆ ಸೇರಿ ಸೀಟು ಹಂಚಿಕೆ ಕುರಿತು ತೀರ್ಮಾನ ತೆಗೆದುಕೊಳ್ಳಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT