ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಕೇನ್ 
ದೇಶ

ಕೇಜ್ರಿವಾಲ್, ತೋಮರ್ ರಾಜನಾಮೆ ನೀಡಲಿ: ಕಾಂಗ್ರೆಸ್

ದೆಹಲಿ ಕಾನೂನು ಸಚಿವರ ನಕಲಿ ಪ್ರಮಾಣ ಪತ್ರ ವಿವಾದ ಪ್ರತಿಪಕ್ಷಗಳ ಮಧ್ಯೆ ಕಾವೇರಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಜಿತೇಂದರ್ ಸಿಂಗ್ ತೋಮರ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ...

ನವದೆಹಲಿ: ದೆಹಲಿ ಕಾನೂನು ಸಚಿವರ ನಕಲಿ ಪ್ರಮಾಣ ಪತ್ರ ವಿವಾದ ಪ್ರತಿಪಕ್ಷಗಳ ಮಧ್ಯೆ ಕಾವೇರಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಜಿತೇಂದರ್ ಸಿಂಗ್ ತೋಮರ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಕೇನ್ ಅವರು, ಅಧಿಕಾರಕ್ಕೆ ಬರುವಾಗ ಕೇಜ್ರಿವಾಲ್ ಅವರು ಭ್ರಷ್ಟಾಚಾರ ವಿರುದ್ಧ ಕುರಿತಂತೆ ಮಾತನಾಡುತ್ತಿದ್ದರು. ಹೋರಾಟ ನಡೆಸುತ್ತಿದ್ದರು. ಇದೀಗ ಅವರ ಪಕ್ಷದಲ್ಲೇ ಭ್ರಷ್ಟಾಚಾರ ನಡೆದು ಅಧಿಕಾರಿಯೊಬ್ಬ ಬಂಧನಕ್ಕೊಳಗಾಗಿದ್ದಾರೆ. ಇದಕ್ಕೆ ಕೇಜ್ರಿವಾಲ್ ಏನೆಂದು ಉತ್ತರ ನೀಡುತ್ತಾರೆ ಎಂದು ಕೇಜ್ರಿವಾಲ್ ಅವರನ್ನು ಪ್ರಶ್ನಿಸಿದ್ದಾರೆ.

ಜಿತೇಂದರ್ ಸಿಂಗ್ ತೋಮರ್ ಪ್ರಕರಣದ ನೈತಿಕ ಹೊಣೆಯನ್ನು ಅರವಿಂದ್ ಕೇಜ್ರಿವಾಲ್ ಹೊತ್ತು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಹಾಗೆಯೇ ಪ್ರಕರಣದ ಆರೋಪಿಯಾಗಿರುವ ತೋಮರ್ ಸಹ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿ ಕಾನೂನು ಸಚಿವ ಜಿತೇಂದರ್ ಸಿಂಗ್ ತೋಮರ್ ಅವರ ನಕಲಿ ಪ್ರಮಾಣ ಪತ್ರ ವಿವಾದ ಹೈಕೋರ್ಟ್ ನಲ್ಲಿರುವಾಗಲೇ, ನಕಲಿ ಕಾನೂನು ಪದವಿ ಪ್ರಮಾಣ ಪತ್ರ ಆರೋಪದ ಮೇಲೆ ದೆಹಲಿ ಪೊಲೀಸರು ತೋಮರ್ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು ಇಂದು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT