ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಕೇನ್ 
ದೇಶ

ಕೇಜ್ರಿವಾಲ್, ತೋಮರ್ ರಾಜನಾಮೆ ನೀಡಲಿ: ಕಾಂಗ್ರೆಸ್

ದೆಹಲಿ ಕಾನೂನು ಸಚಿವರ ನಕಲಿ ಪ್ರಮಾಣ ಪತ್ರ ವಿವಾದ ಪ್ರತಿಪಕ್ಷಗಳ ಮಧ್ಯೆ ಕಾವೇರಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಜಿತೇಂದರ್ ಸಿಂಗ್ ತೋಮರ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ...

ನವದೆಹಲಿ: ದೆಹಲಿ ಕಾನೂನು ಸಚಿವರ ನಕಲಿ ಪ್ರಮಾಣ ಪತ್ರ ವಿವಾದ ಪ್ರತಿಪಕ್ಷಗಳ ಮಧ್ಯೆ ಕಾವೇರಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಜಿತೇಂದರ್ ಸಿಂಗ್ ತೋಮರ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಕೇನ್ ಅವರು, ಅಧಿಕಾರಕ್ಕೆ ಬರುವಾಗ ಕೇಜ್ರಿವಾಲ್ ಅವರು ಭ್ರಷ್ಟಾಚಾರ ವಿರುದ್ಧ ಕುರಿತಂತೆ ಮಾತನಾಡುತ್ತಿದ್ದರು. ಹೋರಾಟ ನಡೆಸುತ್ತಿದ್ದರು. ಇದೀಗ ಅವರ ಪಕ್ಷದಲ್ಲೇ ಭ್ರಷ್ಟಾಚಾರ ನಡೆದು ಅಧಿಕಾರಿಯೊಬ್ಬ ಬಂಧನಕ್ಕೊಳಗಾಗಿದ್ದಾರೆ. ಇದಕ್ಕೆ ಕೇಜ್ರಿವಾಲ್ ಏನೆಂದು ಉತ್ತರ ನೀಡುತ್ತಾರೆ ಎಂದು ಕೇಜ್ರಿವಾಲ್ ಅವರನ್ನು ಪ್ರಶ್ನಿಸಿದ್ದಾರೆ.

ಜಿತೇಂದರ್ ಸಿಂಗ್ ತೋಮರ್ ಪ್ರಕರಣದ ನೈತಿಕ ಹೊಣೆಯನ್ನು ಅರವಿಂದ್ ಕೇಜ್ರಿವಾಲ್ ಹೊತ್ತು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಹಾಗೆಯೇ ಪ್ರಕರಣದ ಆರೋಪಿಯಾಗಿರುವ ತೋಮರ್ ಸಹ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿ ಕಾನೂನು ಸಚಿವ ಜಿತೇಂದರ್ ಸಿಂಗ್ ತೋಮರ್ ಅವರ ನಕಲಿ ಪ್ರಮಾಣ ಪತ್ರ ವಿವಾದ ಹೈಕೋರ್ಟ್ ನಲ್ಲಿರುವಾಗಲೇ, ನಕಲಿ ಕಾನೂನು ಪದವಿ ಪ್ರಮಾಣ ಪತ್ರ ಆರೋಪದ ಮೇಲೆ ದೆಹಲಿ ಪೊಲೀಸರು ತೋಮರ್ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು ಇಂದು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT