ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಕೇನ್ 
ದೇಶ

ಕೇಜ್ರಿವಾಲ್, ತೋಮರ್ ರಾಜನಾಮೆ ನೀಡಲಿ: ಕಾಂಗ್ರೆಸ್

ದೆಹಲಿ ಕಾನೂನು ಸಚಿವರ ನಕಲಿ ಪ್ರಮಾಣ ಪತ್ರ ವಿವಾದ ಪ್ರತಿಪಕ್ಷಗಳ ಮಧ್ಯೆ ಕಾವೇರಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಜಿತೇಂದರ್ ಸಿಂಗ್ ತೋಮರ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ...

ನವದೆಹಲಿ: ದೆಹಲಿ ಕಾನೂನು ಸಚಿವರ ನಕಲಿ ಪ್ರಮಾಣ ಪತ್ರ ವಿವಾದ ಪ್ರತಿಪಕ್ಷಗಳ ಮಧ್ಯೆ ಕಾವೇರಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಜಿತೇಂದರ್ ಸಿಂಗ್ ತೋಮರ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಕೇನ್ ಅವರು, ಅಧಿಕಾರಕ್ಕೆ ಬರುವಾಗ ಕೇಜ್ರಿವಾಲ್ ಅವರು ಭ್ರಷ್ಟಾಚಾರ ವಿರುದ್ಧ ಕುರಿತಂತೆ ಮಾತನಾಡುತ್ತಿದ್ದರು. ಹೋರಾಟ ನಡೆಸುತ್ತಿದ್ದರು. ಇದೀಗ ಅವರ ಪಕ್ಷದಲ್ಲೇ ಭ್ರಷ್ಟಾಚಾರ ನಡೆದು ಅಧಿಕಾರಿಯೊಬ್ಬ ಬಂಧನಕ್ಕೊಳಗಾಗಿದ್ದಾರೆ. ಇದಕ್ಕೆ ಕೇಜ್ರಿವಾಲ್ ಏನೆಂದು ಉತ್ತರ ನೀಡುತ್ತಾರೆ ಎಂದು ಕೇಜ್ರಿವಾಲ್ ಅವರನ್ನು ಪ್ರಶ್ನಿಸಿದ್ದಾರೆ.

ಜಿತೇಂದರ್ ಸಿಂಗ್ ತೋಮರ್ ಪ್ರಕರಣದ ನೈತಿಕ ಹೊಣೆಯನ್ನು ಅರವಿಂದ್ ಕೇಜ್ರಿವಾಲ್ ಹೊತ್ತು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಹಾಗೆಯೇ ಪ್ರಕರಣದ ಆರೋಪಿಯಾಗಿರುವ ತೋಮರ್ ಸಹ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿ ಕಾನೂನು ಸಚಿವ ಜಿತೇಂದರ್ ಸಿಂಗ್ ತೋಮರ್ ಅವರ ನಕಲಿ ಪ್ರಮಾಣ ಪತ್ರ ವಿವಾದ ಹೈಕೋರ್ಟ್ ನಲ್ಲಿರುವಾಗಲೇ, ನಕಲಿ ಕಾನೂನು ಪದವಿ ಪ್ರಮಾಣ ಪತ್ರ ಆರೋಪದ ಮೇಲೆ ದೆಹಲಿ ಪೊಲೀಸರು ತೋಮರ್ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು ಇಂದು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ