ಎಲ್ಇಡಿ ಬಲ್ಬ್ 
ದೇಶ

ಕೇಂದ್ರ, ಉತ್ತರ ಪ್ರದೇಶ ಸರ್ಕಾರದಿಂದ ವಾರಾಣಸಿಯಲ್ಲಿ 13 ಲಕ್ಷ ಎಲ್ಇಡಿ ಬಲ್ಬ್ ವಿತರಣೆ

ವಿದ್ಯುತ್ ಉಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದ್ದು ವಾರಾಣಸಿಯಲ್ಲಿ 13 ಲಕ್ಷ ಎಲ್.ಇ.ಡಿ ಬಲ್ಬ್ ಗಳನ್ನು ನೀಡಲು ನಿರ್ಧರಿಸಿದೆ.

ನವದೆಹಲಿ: ವಿದ್ಯುತ್ ಉಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದ್ದು  ವಾರಾಣಸಿಯಲ್ಲಿ  13 ಲಕ್ಷ  ಎಲ್.ಇ.ಡಿ ಬಲ್ಬ್ ಗಳನ್ನು ನೀಡಲು ನಿರ್ಧರಿಸಿದೆ.

ಕೇಂದ್ರ ಇಂಧನ ಖಾತೆ ಸಚಿವ ಪಿಯೂಷ್‌ ಗೋಯಲ್‌, ವಾರಾಣಸಿಯಲ್ಲಿ  ಎಲ್.ಇ.ಡಿ ಆಧಾರಿತ ಸ್ಮಾರ್ಟ್ ಸ್ಟ್ರೀಟ್ ಲೈಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, 2,28,496 ಗ್ರಾಹಕರಿಗೆ ಬಲ್ಬ್ ನೀಡಲು ಉದ್ದೇಶಿಸಲಾಗಿದೆ. ದೇಶಾದ್ಯಂತ ಎಲ್.ಇ.ಡಿ ಬಲ್ಬ್ ಗಳ ಬಳಕೆ ಹೆಚ್ಚಿಸುವ ಮೂಲಕ 10,000 ಮೆಗಾ ವ್ಯಾಟ್ ವಿದ್ಯುತ್ ಬಳೆಕೆಯಾಗುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ.

ಎಲ್.ಇ.ಡಿ ಬಲ್ಬ್ ಗಳ ಬಳಕೆ ಹೆಚ್ಚಿಸುವುದರಿಂದ ವಾರಾಣಸಿಯಲ್ಲಿ 45 ಮೆಗಾ ವ್ಯಾಟ್ ನಷ್ಟು  ವಿದ್ಯುತ್ ಬೇಡಿಕೆ ಕಡಿಮೆಯಾಗಲಿದ್ದು ಇದರಿಂದ ಸುಮಾರು 68 ಕೋಟಿ ಉಳಿತಾಯವಾಗಲಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಬೀದಿದೀಪಗಳಿಗೂ ಸಹ ಎಲ್.ಇ.ಡಿ ಬಲ್ಬ್ ಗಳನ್ನು ಅಳವಡಿಸಲಾಗುವುದು, ಇದರಿಂದಾಗಿ ಮನೆಗಳಲ್ಲಿ ವಿದ್ಯುತ್ ಉಳಿತಾಯವಾಗುವುದರೊಂದಿಗೆ ರಸ್ತೆಬದಿಯ ದೀಪಗಳಿಂದಲೂ ವಿದ್ಯುತ್ ಬಳಕೆ   ಕಡಿಮೆಯಾಗಲಿದೆ ಎಂದಿದ್ದಾರೆ.

ಎನರ್ಜಿ ಎಫಿಶಿಯನ್ಸಿ ಸರ್ವಿಸಸ್(ಎ.ಎಸ್.ಎಸ್.ಎಲ್) ಸಂಸ್ಥೆ ವಾರಾಣಸಿಯಲ್ಲಿ ಸುಮಾರು  36 ,077 ಬೀದಿ ದೀಪಗಳಿಗೆ ಎಲ್.ಇ.ಡಿ ಬಲ್ಬ್ ಗಳನ್ನು ಅಳವಡಿಸಲಿದೆ. 5 -7 ವರ್ಷಗಳಲ್ಲಿ ವಿದ್ಯುತ್ ಉಳಿತಾಯದಿಂದಾಗುವ ಲಾಭದಲ್ಲಿ ಸ್ಥಳೀಯ ನಗರ ಪಾಲಿಕೆಗಳು ಎಎಸ್ಎಸ್ಎಲ್ ಗೆ ಹಣ ಪಾವತಿ ಮಾಡಲಿವೆ.  ಕಡಿಮೆ ದರದಲ್ಲಿ ಎಲ್.ಇ.ಡಿ ಬಲ್ಬ್ ಗಳನ್ನು ವಿತರಿಸುವ ಯೋಜನೆ ಜಾರಿಗೆ ಬರಲಿದೆ ಎಂದು ಇಂಧನ ಖಾತೆ ಸಚಿವ ಗೋಯಲ್ ಕಳೆದ ತಿಂಗಳು ಹೇಳಿದ್ದರು. ಅದರಂತೆಯೇ ಈಗ ಕಡಿಮೆ ದರದಲ್ಲಿ ಎಲ್.ಇ.ಡಿ ಬಲ್ಬ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ ಎಲ್.ಇ.ಡಿ  ಬಲ್ಬ್ ಗಳು ಪೂರ್ಣಪ್ರಮಾಣದಲ್ಲಿ ದೇಶಾದ್ಯಂತ ಬಳಕೆಯಾಗಲಿದ್ದು, ಅತಿ ಹೆಚ್ಚು ವಿದ್ಯುತ್ ಉಳಿತಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT