ಎಲ್ಇಡಿ ಬಲ್ಬ್ 
ದೇಶ

ಕೇಂದ್ರ, ಉತ್ತರ ಪ್ರದೇಶ ಸರ್ಕಾರದಿಂದ ವಾರಾಣಸಿಯಲ್ಲಿ 13 ಲಕ್ಷ ಎಲ್ಇಡಿ ಬಲ್ಬ್ ವಿತರಣೆ

ವಿದ್ಯುತ್ ಉಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದ್ದು ವಾರಾಣಸಿಯಲ್ಲಿ 13 ಲಕ್ಷ ಎಲ್.ಇ.ಡಿ ಬಲ್ಬ್ ಗಳನ್ನು ನೀಡಲು ನಿರ್ಧರಿಸಿದೆ.

ನವದೆಹಲಿ: ವಿದ್ಯುತ್ ಉಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದ್ದು  ವಾರಾಣಸಿಯಲ್ಲಿ  13 ಲಕ್ಷ  ಎಲ್.ಇ.ಡಿ ಬಲ್ಬ್ ಗಳನ್ನು ನೀಡಲು ನಿರ್ಧರಿಸಿದೆ.

ಕೇಂದ್ರ ಇಂಧನ ಖಾತೆ ಸಚಿವ ಪಿಯೂಷ್‌ ಗೋಯಲ್‌, ವಾರಾಣಸಿಯಲ್ಲಿ  ಎಲ್.ಇ.ಡಿ ಆಧಾರಿತ ಸ್ಮಾರ್ಟ್ ಸ್ಟ್ರೀಟ್ ಲೈಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, 2,28,496 ಗ್ರಾಹಕರಿಗೆ ಬಲ್ಬ್ ನೀಡಲು ಉದ್ದೇಶಿಸಲಾಗಿದೆ. ದೇಶಾದ್ಯಂತ ಎಲ್.ಇ.ಡಿ ಬಲ್ಬ್ ಗಳ ಬಳಕೆ ಹೆಚ್ಚಿಸುವ ಮೂಲಕ 10,000 ಮೆಗಾ ವ್ಯಾಟ್ ವಿದ್ಯುತ್ ಬಳೆಕೆಯಾಗುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ.

ಎಲ್.ಇ.ಡಿ ಬಲ್ಬ್ ಗಳ ಬಳಕೆ ಹೆಚ್ಚಿಸುವುದರಿಂದ ವಾರಾಣಸಿಯಲ್ಲಿ 45 ಮೆಗಾ ವ್ಯಾಟ್ ನಷ್ಟು  ವಿದ್ಯುತ್ ಬೇಡಿಕೆ ಕಡಿಮೆಯಾಗಲಿದ್ದು ಇದರಿಂದ ಸುಮಾರು 68 ಕೋಟಿ ಉಳಿತಾಯವಾಗಲಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಬೀದಿದೀಪಗಳಿಗೂ ಸಹ ಎಲ್.ಇ.ಡಿ ಬಲ್ಬ್ ಗಳನ್ನು ಅಳವಡಿಸಲಾಗುವುದು, ಇದರಿಂದಾಗಿ ಮನೆಗಳಲ್ಲಿ ವಿದ್ಯುತ್ ಉಳಿತಾಯವಾಗುವುದರೊಂದಿಗೆ ರಸ್ತೆಬದಿಯ ದೀಪಗಳಿಂದಲೂ ವಿದ್ಯುತ್ ಬಳಕೆ   ಕಡಿಮೆಯಾಗಲಿದೆ ಎಂದಿದ್ದಾರೆ.

ಎನರ್ಜಿ ಎಫಿಶಿಯನ್ಸಿ ಸರ್ವಿಸಸ್(ಎ.ಎಸ್.ಎಸ್.ಎಲ್) ಸಂಸ್ಥೆ ವಾರಾಣಸಿಯಲ್ಲಿ ಸುಮಾರು  36 ,077 ಬೀದಿ ದೀಪಗಳಿಗೆ ಎಲ್.ಇ.ಡಿ ಬಲ್ಬ್ ಗಳನ್ನು ಅಳವಡಿಸಲಿದೆ. 5 -7 ವರ್ಷಗಳಲ್ಲಿ ವಿದ್ಯುತ್ ಉಳಿತಾಯದಿಂದಾಗುವ ಲಾಭದಲ್ಲಿ ಸ್ಥಳೀಯ ನಗರ ಪಾಲಿಕೆಗಳು ಎಎಸ್ಎಸ್ಎಲ್ ಗೆ ಹಣ ಪಾವತಿ ಮಾಡಲಿವೆ.  ಕಡಿಮೆ ದರದಲ್ಲಿ ಎಲ್.ಇ.ಡಿ ಬಲ್ಬ್ ಗಳನ್ನು ವಿತರಿಸುವ ಯೋಜನೆ ಜಾರಿಗೆ ಬರಲಿದೆ ಎಂದು ಇಂಧನ ಖಾತೆ ಸಚಿವ ಗೋಯಲ್ ಕಳೆದ ತಿಂಗಳು ಹೇಳಿದ್ದರು. ಅದರಂತೆಯೇ ಈಗ ಕಡಿಮೆ ದರದಲ್ಲಿ ಎಲ್.ಇ.ಡಿ ಬಲ್ಬ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ ಎಲ್.ಇ.ಡಿ  ಬಲ್ಬ್ ಗಳು ಪೂರ್ಣಪ್ರಮಾಣದಲ್ಲಿ ದೇಶಾದ್ಯಂತ ಬಳಕೆಯಾಗಲಿದ್ದು, ಅತಿ ಹೆಚ್ಚು ವಿದ್ಯುತ್ ಉಳಿತಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT