ರಾಜನಾಥ್ ಸಿಂಗ್ 
ದೇಶ

ತೋಮರ್ ಬಂಧನ: ಗೃಹ ಸಚಿವಾಲಯದ ಪಾತ್ರ ಇಲ್ಲ; ರಾಜನಾಥ್ ಸಿಂಗ್

ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನ...

ನವದೆಹಲಿ: ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನದಲ್ಲಿ ಗೃಹ ಸಚಿವಾಲಯದ ಪಾತ್ರ ಇಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.

ತೋಮರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಪ್ರಕರಣದಲ್ಲಿ ಗೃಹ ಸಚಿವಾಲಯ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಬರುವುದಿಲ್ಲ ಎಂದಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ, ಪೊಲೀಸರು ಪ್ರಕರಣದ ತನಿಖೆ ನಡೆಸಿ ಕಾನೂನು ಪ್ರಕಾರವೇ ಕ್ರಮ ತೆಗೆದುಕೊಂಡಿದ್ದಾರೆ. ಈ ದೆಹಲಿ ಪೊಲೀಸ್ ಪಿಆರ್‌ಒ ಮಾಧ್ಯಮಕ್ಕೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ತೋಮರ್ ಅವರನ್ನು ದಿಢೀರ್ ಬಂಧಿಸಿರುವ ದೆಹಲಿ ಪೊಲೀಸ್ ಕ್ರಮದ ಬಗ್ಗೆ ಆಮ್ ಆದ್ಮಿ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ದೆಹಲಿ ಸರ್ಕಾರದ ಮೇಲೆ ಒತ್ತಡ ಹೇರುವ ಕುತಂತ್ರ ನಡೆಸಿದೆ ಎಂದು ಆರೋಪಿಸಿದೆ.

ತೋಮರ್‌ ವಿರುದ್ಧ ದೆಹಲಿಯ ಬಾರ್‌ ಕೌನ್ಸಿಲ್‌ ನೀಡಿದ ದೂರಿನನ್ವಯ ಸೋಮವಾರ ರಾತ್ರಿ ಎಫ್ಐಆರ್‌ ದಾಖಲಿಕೊಂಡಿದ್ದ ದೆಹಲಿ ಪೊಲೀಸರು, ಇಂದು ಬೆಳಗ್ಗೆ  ದೆಹಲಿ ಕಾನೂನು ಸಚಿವರನ್ನು ಬಂಧಿಸಿ  ವಸಂತ ವಿಹಾರ  ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದಾರೆ.

ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ತೋಮರ್ ಅವರು ತಮ್ಮ ವಿದ್ಯಾರ್ಹತೆ ಕುರಿತು ಸಲ್ಲಿಸಿದ್ದ ಪದವಿ ಪ್ರಮಾಣ ಪತ್ರ ನಕಲಿ ಎಂಬ ವಿಷಯ ಬಹಿರಂಗಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಿತೇಂದ್ರ ಸಿಂಗ್‌ ವಿರುದ್ದ ವಿಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ತನಿಖೆ ನಡೆಸಲು ಆಗ್ರಹಿಸಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT