ಕೆ.ಎಂ.ಮಾಣಿ 
ದೇಶ

ಕೇರಳ ಹಣಕಾಸು ಸಚಿವರಿಗೆ ಸುಳ್ಳು ಪತ್ತೆ ಪರೀಕ್ಷೆ ಮಾಡಿಸಿ: ಸಿಪಿಎಂ ಆಗ್ರಹ

ಬಾರ್ ಗಳಿಗೆ ಅನುಮತಿ ನೀಡಿಲು ಲಂಚ ಪಡೆದ ಆರೋಪ ಎದುರಿಸುತ್ತಿರುವ ಕೇರಳ ಹಣಕಾಸು ಸಚಿವ ಕೆ.ಎಂ.ಮಾಣಿ ಅವರಿಗೆ ಸುಳ್ಳುಪತ್ತೆ ಪರೀಕ್ಷೆ....

ತಿರುವನಂತಪುರ: ಬಾರ್ ಗಳಿಗೆ ಅನುಮತಿ ನೀಡಿಲು ಲಂಚ ಪಡೆದ ಆರೋಪ ಎದುರಿಸುತ್ತಿರುವ ಕೇರಳ ಹಣಕಾಸು ಸಚಿವ ಕೆ.ಎಂ.ಮಾಣಿ ಅವರಿಗೆ ಸುಳ್ಳುಪತ್ತೆ ಪರೀಕ್ಷೆ ಮಾಡಿಸುವ ಅವಶ್ಯಕತೆಯಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡೆಯೇರಿ ಬಾಲಕೃಷ್ಣನ್ ಆಗ್ರಹಿಸಿದ್ದಾರೆ.

ಬಾರ್ ಲಂಚ ಪ್ರಕರಣ ಕೇರಳ ವಿಧಾನಸಭೆಯ 14 ನೇ  ಅಧಿವೇಶನದ ಮೊದಲನೇ ದಿನವೇ ಕೋಲಾಹಲ ಸೃಷ್ಠಿಸಿದೆ. ಹಣಕಾಸು ಸಚಿವ ಕೆ.ಎಂ ಮಾಣಿ ಮತ್ತು ಅಬಕಾರಿ ಸಚಿವ ಕೆ.ಬಾಲು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷ ಎಲ್ ಡಿಎಫ್ ಒತ್ತಾಯಿಸಿದೆ.

ಮಾರ್ಟ್ 13 ರಂದು ನಡೆದ ಬಜೆಟ್ ಅಧಿವೇಶನದಲ್ಲಿ ಕೇರಳ ವಿಧಾನಸಭೆ ರಣರಂಗವಾಗಿ ಮಾರ್ಪಟ್ಟಿತ್ತು. ಬಾರ್ ಲಂಚ ಪ್ರಕರಣ ಸಂಬಂಧಿಸಿದಂತೆ ಸಚಿವರಾದ ಕೆ.ಎಂ ಮಾಣಿ ಮತ್ತು ಕೆ ಬಾಬು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿರೋಧ ಪಕ್ಷದವರು ಶಾಸನ ಸಭೆಯಲ್ಲಿ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದರು.

ಗೃಹ ಸಚಿವ ರಮೇಶ್ ಚೆನ್ನಿತ್ತಾಲ ವಿರೋಧ ಪಕ್ಷದವರ ಆರೋಪವನ್ನು ತಳ್ಳಿ ಹಾಕಿದ್ದರು. ಜೊತೆಗೆ ಪ್ರಕರಣ ಸಂಬಂಧ ಸಮಿತಿಯೊಂದನ್ನು ನೇಮಿಸಿ ತನಿಖೆಗೆ ಆದೇಶಿಸಿದ್ದರು.  ಸದ್ಯದಲ್ಲಿ ತನಿಖೆ ಅಂತಿಮ ಹಂತ ತಲುಪಿದ್ದು, ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ತನಿಖಾ ತಂಡ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದೆ ಎಂದು ಚೆನ್ನಿತಾಲ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT