ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ 
ದೇಶ

ಸೂರ್ಯ ನಮಸ್ಕಾರ ವಿರೋಧಿಗಳನ್ನು ಸಮುದ್ರದಲ್ಲಿ ಮುಳುಗಿಸಿ: ಯೋಗಿ ಆದಿತ್ಯನಾಥ್

ತಮ್ಮ ವಿವಾದಿತ ಹೇಳಿಕೆಯಿಂದಲೇ ಸದಾ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ಸುದ್ದಿಗೆ ಬಂದಿದ್ದು, ಯೋಗ, ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಸಮುದ್ರದಲ್ಲಿ ಮುಳುಗಿಸಬೇಕು...

ನವದೆಹಲಿ: ತಮ್ಮ ವಿವಾದಿತ ಹೇಳಿಕೆಯಿಂದಲೇ ಸದಾ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ಸುದ್ದಿಗೆ ಬಂದಿದ್ದು, ಯೋಗ, ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಸಮುದ್ರದಲ್ಲಿ ಮುಳುಗಿಸಬೇಕು ಇಲ್ಲವೇ ಭಾರತದಿಂದ ಹೊರಗೆ ಹಾಕಿ ಎಂದು ಮಂಗಳವಾರ ಹೇಳಿದ್ದಾರೆ.

ಯೋಗ ದಿನದಂದು ಸೂರ್ಯ ನಮಸ್ಕಾರ ಮಾಡುವ ಕುರಿತು ಅಪಸ್ವರ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಇಂದು ವಾರಣಾಸಿಯ ಅನ್ನಪೂರ್ಣ ಮಂದಿರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಸೂರ್ಯ ನಮಸ್ಕಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವವರನ್ನು ದೇಶದಿಂದ ಹೊರಗೆ ಹಾಕಬೇಕು ಇಲ್ಲವೇ ಬೆಳಕಿಲ್ಲದ ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿ ಸಾಯುವವರೆಗೂ ಬೆಳಕು ನೋಡದಂತೆ ಮಾಡಬೇಕು ಎಂದು ಹೇಳಿದ್ದಾರೆ.

ಅಂತರಾಷ್ಟ್ರೀಯ ಯೋಗದಿಂದು 100 ಕ್ಕೂ ಹೆಚ್ಚು ದೇಶಗಳು ಸೂರ್ಯ ನಮಸ್ಕಾರ, ಯೋಗ ಮಾಡಲು ಒಪ್ಪಿಗೆ ಸೂಚಿಸಿದೆ. ಈ 100 ದೇಶಗಳಲ್ಲಿ 40 ದೇಶಗಳು ಮುಸ್ಲಿಂ ಸಮುದಾಯದ ದೇಶಗಳಾಗಿವೆ. ಸೂರ್ಯ ನಮಸ್ಕಾರ ಎಂಬುದು ಯೋಗದ ಒಂದು ಭಾಗ. ಸೂರ್ಯ ನಮಸ್ಕಾರ ಮಾಡುವುದರಿಂದ ಆರೋಗ್ಯ ಹಾಗೂ ಮನಸ್ಸು ಶುದ್ಧಗೊಳ್ಳುತ್ತದೆ. ಸೂರ್ಯ ಎಂದಿಗೂ ಜಾತಿ, ಧರ್ಮ ಎಂದು ಭೇದ ಮಾಡಿ ಬೆಳಕು ನೀಡುವುದಿಲ್ಲ. ಇಂತಹ ಸೂರ್ಯ ನಮಸ್ಕಾರಕ್ಕೆ ಸಂಪ್ರದಾಯ ಎಂದು ಹೇಳಿ ವಿರೋಧ ವ್ಯಕ್ತಪಡಿಸುತ್ತಿರುವವರನ್ನು ಭಾರತದಿಂದ ಹೊರಗೆ ಹಾಕಬೇಕು ಇಲ್ಲವೇ ಜೀವನ ಪರ್ಯಂತ ಬೆಳಕಿಲ್ಲದ ಕೋಣೆಯಲ್ಲಿ ಹಾಕಬೇಕು ಎಂದು ಹೇಳಿದ್ದಾರೆ.

ಅಂತರಾಷ್ಟ್ರೀಯ ಯೋಗ ದಿನಾಚರಣೆಯಂದು ದೇಶದಾದ್ಯಂತ ಎಲ್ಲಾ ಶಾಲೆಗಳಲ್ಲಿ ಸೂರ್ಯ ನಮಸ್ಕಾರ ಹಾಗೂ ಯೋಗ ಕಡ್ಡಾಯಗೊಳಿಸುವ ಕುರಿತಂತೆ ಕೇಂದ್ರ ಸರ್ಕಾರ ಆಲೋಚನೆ ನಡೆಸಿತ್ತು. ಇದಕ್ಕೆ ಅಖಿಲ ಭಾರತ ಮುಸ್ಲಿಮರ ವೈಯಕ್ತಿಕ ಕಾನೂನು ಮಂಡಳಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ, ಅಂತರಾಷ್ಟ್ರೀಯ ಯೋಗ ದಿನದಂದೇ ಶಾಲೆಗಳಲ್ಲಿ ಸೂರ್ಯ ನಮಸ್ಕಾರ ಹಾಗೂ ಯೋಗ ಕಡ್ಡಾಯ ವಿರೋಧಿ ಅಭಿಯಾನವನ್ನು ನಡೆಸುವುದಾಗಿ ಹೇಳಿತ್ತು.

ಅಂತರಾಷ್ಟ್ರೀಯ ಯೋಗದಿನದಂದು ಶಾಲೆಗಳಲ್ಲಿ ಸೂರ್ಯ ನಮಸ್ಕಾರ ಹಾಗೂ ಯೋಗ ಕಡ್ಡಾಯ ಕುರಿತಂತೆ ಮುಸ್ಲಿಂ ಸಮುದಾಯಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ಈಗಾಗಲೇ ತನ್ನ ನಿರ್ಣಯವನ್ನು ಹಿಂದೆ ತೆಗೆದುಕೊಂಡಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT