ಯೋಗೇಂದ್ರ ಯಾದವ್ 
ದೇಶ

ತೋಮರ್ ಪದವಿ ಅಸಲಿಯಾಗಿದ್ದರೆ ಬಹಿರಂಗಪಡಿಸಿ: ಯೋಗೇಂದ್ರ ಯಾದವ್

ದೆಹಲಿ ಕಾನೂನು ಸಚಿವ ಜಿತೆಂದ್ರ ಸಿಂಗ್ ತೋಮರ್ ಅವರ ದಿಡೀರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಮಾಜಿ ನಾಯಕ ಯೋಗೇಂದ್ರ ...

ನವದೆಹಲಿ: ದೆಹಲಿ ಕಾನೂನು ಸಚಿವ ಜಿತೆಂದ್ರ ಸಿಂಗ್ ತೋಮರ್ ಅವರ ದಿಡೀರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಮಾಜಿ ನಾಯಕ ಯೋಗೇಂದ್ರ ಯಾದವ್ ಅವರು, ತೋಮರ್ ಅವರು ಕಾನೂನು ಪದವಿ ಪಡೆದಿರುವುದೇ ನಿಜವಾಗಿದ್ದರೆ ಆಮ್ ಆದ್ಮಿ ಪಕ್ಷ ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲಿ ಎಂದು ಹೇಳಿದ್ದಾರೆ.

ನಕಲಿ ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ಪೊಲೀಸರು ಆಪ್ ಸಚಿವರನ್ನು ಬಂಧಿಸಿರುವ ಬಗ್ಗೆ ಯಾದವ್ ಅವರು ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾಗಲ್‌ಪುರ ವಿಶ್ವವಿದ್ಯಾಲಯದಿಂದ ತೋಮರ್ ಅವರು ನಕಲಿ ಪದವಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಈ ಹಿಂದೆ ಬಿಜೆಪಿ ಆರೋಪಿಸಿತ್ತು. ಆದರೆ ಈ ಆರೋಪವನ್ನು ತಳ್ಳಿಹಾಕಿದ್ದ ತೋಮರ್, ಇದು ರಾಜಕೀಯ ಪಿತೂರಿ ಎಂದಿದ್ದರು.

ತೋಮರ್ ಸಿಂಗ್ ಅವರನ್ನು ಬಂಧಿಸಲಾಗಿದೆ ಎಂದು ಹೇಳಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಸಹ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ದೂರಿದ್ದಾರೆ. ದೆಹಲಿ ಪೊಲೀಸರು ಯಾವುದೇ ನೋಟಿಸ್ ನೀಡದೇ ಆಪ್ ಸಚಿವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT