ಸಾಂದರ್ಭಿಕ ಚಿತ್ರ 
ದೇಶ

ಮುಂಬೈ ಸಮೀಪ ಚಂಡಮಾರುತ: ಭಾರಿ ಮಳೆ ಸಾಧ್ಯತೆ

ಮುಂಬೈ ಬಳಿ ಭಾರಿ ಚಂಡಮಾರುತ ಕಾಣಿಸಿಕೊಂಡಿದ್ದು, ಇದರ ಪ್ರಭಾವದಿಂದ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ...

ಬೆಂಗಳೂರು: ಮುಂಬೈ ಬಳಿ ಭಾರಿ ಚಂಡಮಾರುತ ಕಾಣಿಸಿಕೊಂಡಿದ್ದು, ಇದರ ಪ್ರಭಾವದಿಂದ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅಶೋಬಾ ಎಂಬ ಹೆಸರಿನ ಈ ಚಂಡ ಮಾರುತ ಮಂಬೈ ನಿಂದ 570 ಕಿಮೀ ದೂರದಲ್ಲಿ ಕಾಣಿಸಿ ಕೊಂಡಿದ್ದು, ಇದು ದಿನ ಕಳೆದಂತೆ ಹೆಚ್ಚು ತೀವ್ರ ವಾಗುತ್ತಿದೆ.

ಇದರ ಪರಿಣಾಮ ಈಗಾಗಲೇ ಮಂಗಳೂರಿನಲ್ಲಿ 8 ಸೆಂ.ಮೀ ಮಳೆಯಾಗಿದ್ದು, ಅದೇ ರೀತಿ ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯಲಿದೆ. ಮಂಗಳೂರು, ಉಡುಪಿಯಲ್ಲಿ ತಲಾ 8 ಸೆಂ.ಮೀ ಮಳೆಯಾಗಿದ್ದರೆ, ಉಡುಪಿಯಲ್ಲಿ ತಲಾ 8ಸೆ.ಮೀ. ಮಳೆಯಾಗಿದ್ದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ತಲಾ 6 ಸೆ.ಮೀ ಮಳೆಯಾಗಿದೆ.

ಈ ಮಧ್ಯೆ ನಿಧಾನಗತಿಯಲ್ಲಿ ಆಗಮಿ ಸುತ್ತಿರುವ ಮುಂಗಾರು ಕೇರಳ ರಾಜ್ಯವನ್ನು ಸಂಪೂರ್ಣ ಆವರಿಸಿದ್ದು, ಕರಾವಳಿಯನ್ನು ಬಹುತೇಕ ಸುತ್ತುವರಿದಿದೆ. ಇದರೊಂದಿಗೆ ಮೈಸೂರು, ಮಂಡ್ಯ ಸುತ್ತಮುತ್ತ ಸಾಧಾರಣ ಮಳೆ ತರುವ ಮೂಲಕ ಮುಂಗಾರು ರಾಜ್ಯದಲ್ಲಿ ತನ್ನ ಪ್ರಭಾವನ್ನು ವಿಸ್ತರಿಸುತ್ತಿದೆ ಎಂದು ಹವಾಮಾನ ಇಲಾಖೆಯ ಪ್ರಭಾರ ನಿರ್ದೇಶಕ ಸುಂದರ್ ಎಂ.ಮೇತ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT