ಮಾರನ್ ಸಹೋದರರು 
ದೇಶ

ಮದ್ರಾಸ್ ಹೈಕೋರ್ಟ್ ನಿಂದ ಮಾರನ್ ಸಹೋದರರ ಅರ್ಜಿ ವಜಾ

2ಜಿ ಪ್ರಕರಣದಲ್ಲಿ ಏರ್ ಸೆಲ್-ಮ್ಯಾಕ್ಸಿಸ್ ಸಂಸ್ಥೆಗಳ ನಡುವಿನ ಒಪ್ಪಂದಕ್ಕೆ ಸಂಬಂಧಿಸಿದಂತೆ ಮಾರನ್ ಸಹೋದರರಿಗಾ ಭಾರಿ ಹಿನ್ನಡೆಯಾಗಿದ್ದು, ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ..

ಚೆನ್ನೈ: 2ಜಿ ಪ್ರಕರಣದಲ್ಲಿ ಏರ್ ಸೆಲ್-ಮ್ಯಾಕ್ಸಿಸ್ ಸಂಸ್ಥೆಗಳ ನಡುವಿನ ಒಪ್ಪಂದಕ್ಕೆ ಸಂಬಂಧಿಸಿದಂತೆ ಮಾರನ್ ಸಹೋದರರಿಗಾ ಭಾರಿ ಹಿನ್ನಡೆಯಾಗಿದ್ದು, ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ಮಾರನ್ ಸಹೋದರರು ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

2ಜಿ ಪ್ರಕರಣದ ಏರ್ ಸೆಲ್-ಮ್ಯಾಕ್ಸಿಸ್ ಸಂಸ್ಥೆಗಳ ನಡುವಿನ ಒಪ್ಪಂದದಲ್ಲಿ ಭಾರಿ ಅಕ್ರಮವೆಸಗಲಾಗಿದೆ ಎಂಬ ಆರೋಪದ ಮೇಲೆ ಜಾರಿನಿರ್ದೇಶನಾಲಯ ಮಾರನ್ ಸಂಸ್ಥೆಗೆ ಸೇರಿದ ಸುಮಾರು 742 ಕೋಟಿ ರು. ಅಧಿಕ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಜಾರಿ ನಿರ್ದೇಶನಾಲಯದ ಈ ಕ್ರಮವನ್ನು ಪ್ರಶ್ನಿಸಿ ಮಾರನ್ ಸಹೋದರರು ಮದ್ರಾಸ್ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆಯನ್ನು ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ಮಾರನ್ ಸಹೋದರರ ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿ ವಜಾಗೊಳಿಸಿದ ನ್ಯಾಯಾಲಯ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಪ್ರಕರಣ ಸಂಬಂಧ ಈಗಾಗಲೇ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು ಈ ಹಂತದಲ್ಲಿ ತಾವು ಮಧ್ಯಪ್ರವೇಶಿಸುವುದು ಸರಿಯಲ್ಲ. ಹೀಗಾಗಿ ಅರ್ಜಿದಾರರು ಬಯಸಿದರೆ ಮೇಲಂತಸ್ತಿನ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಲಹೆ ನೀಡಿದೆ.

ಕಳೆದ ಏಪ್ರಿಲ್ ತಿಂಗಳಲ್ಲಿ ಕಳಾನಿಧಿ ಮಾರನ್ ಮತ್ತು ದಯಾನಿಧಿ ಮಾರನ್ ಅವರ ಒಡೆತನವಿರುವ ಸಂಸ್ಥೆಗಳ ಮೇಲೆ ದಾಳಿ ಮಾಡಿದ್ದ ಜಾರಿ ನಿರ್ದೇಶನಾಯಲದ ಅಧಿಕಾರಿಗಳು ಸನ್ ಸಮೂಹ ಸಂಸ್ಥೆಗೆ ಸೇರಿದ ಸುಮಾರು 750ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಜಪ್ತಿಗೊಳಿಸಿದ್ದರು. ಇನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮೂಲಗಳ ಪ್ರಕಾರ ಅಂದಿನ ಟೆಲಿಕಾಮ್ ಸಚಿವರಾಗಿದ್ದ ದಯಾನಿಧಿ ಮಾರನ್ ಅವರು ತಮ್ಮ ಸಚಿವಾಲಯವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಏರ್ ಸೆಲ್-ಮಲೇಷ್ಯಾ ಮೂಲದ ಮ್ಯಾಕ್ಸಿಸ್ ಸಂಸ್ಥೆಯ ಪರವಾಗಿ ಕೆಲಸ ಮಾಡಿದ್ದರು ಎಂದು ಆರೋಪಿಸಲಾಗಿದೆ.

ಇದಕ್ಕಾಗಿ ಮಾರನ್ ಅವರು ಮ್ಯಾಕ್ಸಿಸ್ ಸಂಸ್ಥೆಯಿಂದ ಭಾರಿ ಪ್ರಮಾಣದಲ್ಲಿ ಕಿಕ್ ಬ್ಯಾಕ್ ಪಡೆದಿದ್ದರು ಎಂಬ ಆರೋಪಗಳು ಕೇಳಿಬಂದಿತ್ತು. ಹೀಗಾಗಿ ಮಾರನ್ ಸಹೋದರರ ವಿರುದ್ಧ ಹವಾಲ ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT