ರೇವಂತ್ ರೆಡ್ಡಿ 
ದೇಶ

ಮತಲಂಚ: ಶಾಸಕ ರೇವಂತ್ ರೆಡ್ಡಿಗೆ 12 ಗಂಟೆ ಜಾಮೀನು

ಮತಕ್ಕಾಗಿ ಲಂಚ ಆಮೀಷ ಹಗರಣ ಸಂಬಂಧ ಬಂಧನಕ್ಕೀಡಾಗಿರುವ ತೆಲುಗು ದೇಶಂ ಪಕ್ಷ(ಟಿಡಿಪಿ) ಶಾಸಕ ಎ. ರೇವಂತ್‌ ರೆಡ್ಡಿ ಅವರಿಗೆ 12 ಗಂಟೆ ಅವಧಿಗೆ ಜಾಮೀನು ಸಿಕ್ಕಿದೆ...

ಹೈದರಾಬಾದ್: ಮತಕ್ಕಾಗಿ ಲಂಚ ಆಮೀಷ ಹಗರಣ ಸಂಬಂಧ ಬಂಧನಕ್ಕೀಡಾಗಿರುವ ತೆಲುಗು ದೇಶಂ ಪಕ್ಷ(ಟಿಡಿಪಿ) ಶಾಸಕ ಎ. ರೇವಂತ್‌ ರೆಡ್ಡಿ ಅವರಿಗೆ 12 ಗಂಟೆ ಅವಧಿಗೆ ಜಾಮೀನು ಸಿಕ್ಕಿದೆ.

ತಮ್ಮ ಮಗಳ ನಿಶ್ಚಿತಾರ್ಥದಲ್ಲಿ ಪಾಲ್ಗೊಳ್ಳಲು ಜಾಮೀನು ನೀಡುವಂತೆ ರೇವಂತ್ ರೆಡ್ಡಿ ಮನವಿ ಮಾಡಿದ್ದರು. ಇದಕ್ಕೆ ಸ್ಪರ್ಧಿಸಿದ ಸ್ಥಳೀಯ ನ್ಯಾಯಾಲಯದ 12 ಗಂಟೆಗಳ ಅವಧಿಗೆ ಜಾಮೀನು ನೀಡಿದೆ ಈ ಆದೇಶದನ್ವಯ ಗುರುವಾರ ಬೆಳಿಗ್ಗೆ 6 ಗಂಟೆಗೆ ಚೆರ್ಲಪಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಭ್ರಷ್ಟಾಚಾರದ ವಿರೋಧಿ ದಳದ ಬೆಂಗಾವಲು ಪಡೆಯ ರಕ್ಷಣೆಯಲ್ಲಿ ರೆಡ್ಡಿ ಅವರನ್ನು ಜುಬ್ಲಿ ಹಿಲ್ಸ್‌ ನಿವಾಸಕ್ಕೆ ಹಾಗೂ ಅಲ್ಲಿಂದ ಮಧಾಪುರನಲ್ಲಿರುವ ಸಭಾಂಗಣಕ್ಕೆ ಕೊರೆದೊಯ್ಯಲಾಗಿದ್ದು, ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಶುರುವಾಗಿದೆ.

ಎಸಿಬಿ ವಿಶೇಷ ನ್ಯಾಯಾಲಯವು ರೆಡ್ಡಿ ಅವರಿಗೆ ಬುಧವಾರ ಜಾಮೀನು ಮಂಜೂರು ಮಾಡಿತ್ತು. ಈ ವೇಳೆ, ಪ್ರಕರಣದ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡದಂತೆ ಹಾಗೂ ರಾಜಕೀಯ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ ಸೂಚಿಸಿತ್ತು. ಈ  ಹಿನ್ನೆಲೆಯಲ್ಲಿ ಎಸಿಬಿ ಸಿಬ್ಬಂದಿ ಟಿಡಿಪಿ ನಾಯಕನ ಮೇಲೆ ಹದ್ದಿನ ಕಣ್ಣಿಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT