ಚಂದ್ರಬಾಬು ನಾಯ್ಡು 
ದೇಶ

ಮತಲಂಚ: ದೆಹಲಿಯಲ್ಲಿ ನಾಯ್ಡು ಲಾಬಿ

ತೆಲಂಗಾಣದಲ್ಲಿ ಮತಕ್ಕಾಗಿ ಲಂಚ ಹಗರಣ ಈಗ ದೆಹಲಿಗೂ ತಲುಪಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ...

ಹೈದರಾಬಾದ್/ನವದೆಹಲಿ: ತೆಲಂಗಾಣದಲ್ಲಿ ಮತಕ್ಕಾಗಿ ಲಂಚ ಹಗರಣ ಈಗ ದೆಹಲಿಗೂ ತಲುಪಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬುಧವಾರ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದರು.

ಇದರ ಜತೆಗೆ ಹೈದರಾಬಾದ್‍ನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಹಗರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಗುರಿಯಾಗಿರುವ ತೆಲಂಗಾಣದ ಟಿಡಿಪಿ ಶಾಸಕ ಎ.ರೇವಂತ್ ರೆಡ್ಡಿಗೆ ಒಂದು ದಿನದ ಜಾಮೀನು ನೀಡಿ ಹೈದರಾಬಾದ್ ನ ಸ್ಥಳೀಯ ನ್ಯಾಯಯಾಲಯ ಆದೇಶ ನೀಡಿದೆ.

ಸರ್ಕಾರ ಪತನ: ಇದೇ ವೇಳೆ ಎನ್‍ಡಿಟಿವಿ ಜತೆಗೆ ಮಾತನಾಡಿದ ಚಂದ್ರಬಾಬು ನಾಯ್ಡು ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ತಮ್ಮ ಬಂಧನಕ್ಕೆ ಆದೇಶ ನೀಡಿದರೆ ಅವರ ಸರ್ಕಾರ ಪತನವಾಗಲಿದೆ ಎಂದು ಎಚ್ಚರಿಸಿದ್ದಾರೆ. ಸುದ್ದಿವಾಹಿನಿಗಳಲ್ಲಿ ಪ್ರಸಾರವಾದ ಧ್ವನಿ ಮುದ್ರಿಕೆ ನಕಲಿ ಎಂದು ಪ್ರತಿಪಾದಿಸಿದ್ದಾರೆ. ನಾಯ್ಡು ಹೇಳಿಕೆಗೆ ತಿರುಗೇಟು ನೀಡಿದ ತೆಲಂಗಾಣ ಡಿಸಿಎಂ ಮೊಹಮ್ಮದ್ ಅಲಿ ಕಾರಣವಿಲ್ಲದೆ ನಾಯ್ಡು ಕಿರಿಕಿರಿ ಮಾಡುತ್ತಿದ್ದಾರೆ. ಅವರು ಆಡಳಿತದತ್ತ ಗಮನ ಹರಿಸಲಿ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT