ಪೊಲೀಸ್ ಕಸ್ಟಡಿಯಲ್ಲಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ 
ದೇಶ

ಆಪ್ ನಿಂದ ಜಿತೇಂದ್ರ ಸಿಂಗ್ ತೋಮರ್ ಉಚ್ಚಾಟನೆ ಸಾಧ್ಯತೆ

ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿರುವ ಜಿತೇಂದ್ರ ಸಿಂಗ್ ತೋಮರ್ ನ್ನು ಪಕ್ಷದಿಂದ ಉಚ್ಛಾಟಿಸುವ ಸಾಧ್ಯತೆ ಇದೆ

ನವದೆಹಲಿ: ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿದ ಆರೋಪದಡಿ  ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನಕ್ಕೊಳಗಾಗಿರುವುದು ಆಪ್ ಪಕ್ಷದಲ್ಲಿ  ಅಸಮಾಧಾನ  ಮೂಡಿಸಿದೆ.

ಪ್ರಕರಣದಿಂದ ತೀವ್ರ ಆಕ್ರೋಶಗೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಿತೇಂದ್ರ ತೋಮರ್ ನನ್ನು ಪಕ್ಷದಿಂದ ಉಚ್ಛಾಟಿಸುವ ಸಾಧ್ಯತೆ  ಇದೆ ಎಂದು ಹೇಳಲಾಗಿದೆ. 
ಮಾಜಿ  ಕಾನೂನು ಸಚಿವ ಜೈಲಿಗೆ ಹೋಗಿರುವುದರಿಂದ ಆಪ್ ಪಕ್ಷಕ್ಕೆ  ತೀವ್ರ  ಮುಜುಗರ ಉಂಟಾಗಿದ್ದು, ಜಿತೇಂದ್ರ ತೋಮರ್ ನನ್ನು ಉಚ್ಛಾಟಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ. ಅಲ್ಲದೇ  ಕಾನೂನು ಸಮರ ನಡೆಸುತ್ತಿರುವ  ಆಪ್ ಶಾಸಕನಿಗೆ ಪಕ್ಷದಿಂದ ಯಾವುದೇ ನೆರವು ನೀಡದೇ ಇರಲು ತೀರ್ಮಾನಿಸಲಾಗಿದೆಯಂತೆ.

ಇದೇ ವೇಳೆ ನಕಲಿ ಪದವಿ ಬಗ್ಗೆ  ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಅಧಿಕಾರಿಗಳು ತೋಮರ್ ನನ್ನು  ಬಿಹಾರದ ಭಗಲ್ ಪುರಕ್ಕೆ ಕರೆದೊಯ್ಯಲಿದ್ದಾರೆ. ಜಿತೇಂದ್ರ ತೋಮರ್ ಬಂಧನಕ್ಕೊಳಗಾದ ಪ್ರಾರಂಭದಲ್ಲಿ ದೆಹಲಿ ಸರ್ಕಾರ ತೋಮರ್ ಬೆಂಬಲಕ್ಕೆ ನಿಂತಿತ್ತು, ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ತೋಮರ್ ಅವರನ್ನು ಏಕಾಏಕಿ ಬಂಧಿಸಲು ಅವರೇನು ಭಯೋತ್ಪಾದಕರಾ? ಎಂದು ಪ್ರಶ್ನಿಸಿದ್ದರು. ಆದರೆ ನಕಲಿ ಪದವಿ ಪ್ರಮಾಣ ಪತ್ರ ನೀಡಿರುವ ತೋಮರ್ ಜಾಮೀನು ಅರ್ಜಿ ವಜಾಗೊಂಡ ಬಳಿಕ  ಆಮ್ ಆದ್ಮಿ ಪಕ್ಷದ ವರಸೆ ಬದಲಾಗಿದ್ದು, ಪಕ್ಷದಿಂದ ಉಚ್ಚಾಟಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ