ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸಾರ್ವಜನಿಕ ವಲಯ ಬ್ಯಾಂಕುಗಳ ಸಭೆ ನಡೆಸಿದರು 
ದೇಶ

ಬಡ್ಡಿದರದಲ್ಲಿ ಹೆಚ್ಚಿನ ಕಡಿತ: ಅರುಣ್ ಜೇಟ್ಲಿ ವಿಶ್ವಾಸ

ಮುಂಬರುವ ದಿನಗಳಲ್ಲಿ ಬಡ್ಡಿದರದಲ್ಲಿ ಹೆಚ್ಚಿನ ಕಡಿತ ಮಾಡುವುದಾಗಿ ಸಾರ್ವಜನಿಕ ವಲಯ ಬ್ಯಾಂಕುಗಳು ಭರವಸೆ ನೀಡಿವೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಶುಕ್ರವಾರ ತಿಳಿಸಿದ್ದಾರೆ...

ನವದೆಹಲಿ: ಮುಂಬರುವ ದಿನಗಳಲ್ಲಿ ಬಡ್ಡಿದರದಲ್ಲಿ ಹೆಚ್ಚಿನ ಕಡಿತ ಮಾಡುವುದಾಗಿ ಸಾರ್ವಜನಿಕ ವಲಯ ಬ್ಯಾಂಕುಗಳು ಭರವಸೆ ನೀಡಿವೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಶುಕ್ರವಾರ ತಿಳಿಸಿದ್ದಾರೆ.

ಸಾರ್ವಜನಿಕ ವಲಯ ಬ್ಯಾಂಕುಗಳ ಹಣಕಾಸು  ಸಾಧನೆ  ಮತ್ತು ಆರ್ ಬಿಐ ಈ ವರ್ಷ ಇಲ್ಲಿಯವರೆಗೆ ಮಾಡಿರುವ ಬಡ್ಡಿ ದರ ಕಡಿತ ಮೊದಲಾದ ಕುರಿತು ಬ್ಯಾಂಕುಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.ಕೆಲವು ಬ್ಯಾಂಕುಗಳು ಈಗಾಗಲೇ ಬಡ್ಡಿದರವನ್ನು ಕಡಿತ ಮಾಡಿವೆ. ಇನ್ನು ಕೆಲವು ಬ್ಯಾಂಕುಗಳು ಮುಂದಿನ ದಿನಗಳಲ್ಲಿ ಮಾಡಲಿವೆ ಎಂದು ಹೇಳಿದರು.

ಬ್ಯಾಲೆನ್ಸ್ ಶೀಟ್ ಸಮಸ್ಯೆ ಹಾಗೂ ಸಣ್ಣ ಉಳಿತಾಯ ಯೋಜನೆಯಲ್ಲಿ ಅಧಿಕ ಬಡ್ಡಿದರಗಳಿಂದಾಗಿ ಬಡ್ಡಿದರವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಕೆಲವು ಬ್ಯಾಂಕುಗಳು ಅಸಹಾಯಕತೆ ವ್ಯಕ್ತಪಡಿಸಿವೆ ಎಂದು ಹೇಳಿದರು.

ಬ್ಯಾಂಕ್ ವಹಿವಾಟು ಇತ್ತೀಚಿನ ದಿನಗಳಲ್ಲಿ ಉತ್ತಮವಾಗಿದೆ. ಇದರಿಂದಾಗಿ ಗ್ರಾಹಕರ ಅನುಕೂಲಕ್ಕಾಗಿ ಬಡ್ಡಿದರಗಳನ್ನು ಕಡಿತ ಮಾಡುವ ನಿರೀಕ್ಷೆಯಿದೆ ಎಂದು ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜೂನ್ 2ರಂದು ಆರ್ ಬಿಐ 0.25ರಷ್ಟು ಕಾರ್ಯನೀತಿ ದರವನ್ನು ಇಳಿಸಿದ ನಂತರ ಎಸ್ ಬಿ ಐ ಸೇರಿದಂತೆ ದೊಡ್ಡ ಸಾರ್ವಜನಿಕ ವಲಯ ಬ್ಯಾಂಕುಗಳು ತಮ್ಮ ಕನಿಷ್ಠ ಸಾಲ ದರಗಳನ್ನು ಕಡಿತ ಮಾಡಿವೆ. ಆರ್ ಬಿಐ ಶೇ 0.75 ರಷ್ಟು ರೆಪೋ ದರವನ್ನು ಕಡಿಮೆ ಮಾಡಿದ್ದು, ರೆಪೋ ದರ ಈಗ ಶೇ 7.25 ರಷ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT