ದೇಶ

ದೆಹಲಿ ಪೌರ ಕಾರ್ಮಿಕರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ದೆಹಲಿ ಪೌರ ಕಾರ್ಮಿಕರ ಧರಣಿ ನಡೆಸುತ್ತಿದ್ದು, ಇಂದು ಧರಣಿ ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್...

ನವದೆಹಲಿ: ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ದೆಹಲಿ ಪೌರ ಕಾರ್ಮಿಕರ ಧರಣಿ ನಡೆಸುತ್ತಿದ್ದು, ಇಂದು ಧರಣಿ ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನೌಕರರನ್ನು ಸಮಸ್ಯೆಯನ್ನು ಆಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇದು ನಮಗೆ ಸಂಬಂಧಿಸಿಲ್ಲ ಎಂದು ಹೇಳುತ್ತಿದೆ. ಇನ್ನು ಆಪ್ ಸರ್ಕಾರ ಕೂಡ ವ್ಯತಿರಿಕ್ತ ಧೋರಣೆಯನ್ನು ಅನುಸರಿಸುತ್ತಿದೆ. ಹೀಗಾದರೆ ಕಾರ್ಮಿಕರು ಯಾರನ್ನು ನಂಬಬೇಕು ಎಂದು ಪ್ರಶ್ನಿಸಿದರು.

ಕಳೆದ 10 ದಿನಗಳಿಂದ ರಸ್ತೆಬದಿಯಲ್ಲೇ 15 ಸಾವಿರ ಟನ್‌ಗೂ ಅಧಿಕ ತೂಕದ ತ್ಯಾಜ್ಯವನ್ನು ಎಸೆದು ಪ್ರತಿಭಟನೆ ನಡೆಸುತ್ತಿರುವ 12 ಸಾವಿರಕ್ಕೂ ಅಧಿಕ ಪೌರಕಾರ್ಮಿಕರು ಸಂಬಳ ಸಿಗುವವರೆಗೆ ಪ್ರತಿಭಟಿಸಲು ನಿರ್ಧರಿಸಿ ಬೀದಿಗಿಳಿದಿದ್ಧಾರೆ. ಇದರಿಂದ ನಗರದಲ್ಲಿ ಆರೋಗ್ಯ ಸಮಸ್ಯೆ ಆರಂಭವಾಗಿದೆ.

ಇನ್ನು ರಾಹುಲ್ ಗಾಂಧಿ ಅವರು ಮೂವರು ಮೇಯರ್‌ಗಳೊಂದಿಗೆ ಮಾತುಕತೆ ನಡೆಸಿದ್ದು, ಆಪ್ ಸರ್ಕಾರ ಸಂಬಳ ಪಾವತಿಗೆ ಸಮ್ಮತಿಸಿದ್ದು ಶೀಘ್ರವೇ ಬಿಡುಗಡೆ ಮಾಡಲಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT