ಕೇಂದ್ರದ ಮಾಜಿ ಸಚಿವ, ಚಿಕ್ಕಬಳ್ಳಾಪುರದ ಕಾಂಗ್ರೆಸ್ ಸಂಸದ ಎಂ.ವೀರಪ್ಪ ಮೊಯ್ಲಿ 
ದೇಶ

ವೀರಪ್ಪ ಮೊಯ್ಲಿ ಲೇಖನ ಹಿಂಪಡೆದ ದ ಹಿಂದೂ ಪತ್ರಿಕೆ

ಕೇಂದ್ರದ ಮಾಜಿ ಸಚಿವ, ಚಿಕ್ಕಬಳ್ಳಾಪುರದ ಕಾಂಗ್ರೆಸ್ ಸಂಸದ ಎಂ.ವೀರಪ್ಪ ಮೊಯ್ಲಿ ``ದ ಹಿಂದೂ'' ಆಂಗ್ಲ ದಿನಪತ್ರಿಕೆಯ ಜೂ.11ರ ಸಂಚಿಕೆಯಲ್ಲಿ...

ನವದೆಹಲಿ: ಕೇಂದ್ರದ ಮಾಜಿ ಸಚಿವ, ಚಿಕ್ಕಬಳ್ಳಾಪುರದ ಕಾಂಗ್ರೆಸ್ ಸಂಸದ ಎಂ.ವೀರಪ್ಪ ಮೊಯ್ಲಿ ``ದ ಹಿಂದೂ'' ಆಂಗ್ಲ ದಿನಪತ್ರಿಕೆಯ ಜೂ.11ರ ಸಂಚಿಕೆಯಲ್ಲಿ ಬರೆದ ಲೇಖನವನ್ನು ಅದರ ಇಂಟರ್ನೆಟ್ ಆವೃತ್ತಿಯಿಂದ ಹಿಂಪಡೆಯಲಾಗಿದೆ.

ಈ ಬಗ್ಗೆ ಪತ್ರಿಕೆಯ ಅಂತರ್ಜಾಲ ಆವೃತ್ತಿಯಲ್ಲಿ ಹೇಳಿಕೆ ಪ್ರಕಟಿಸಲಾಗಿದೆ. ಪತ್ರಿಕೆಯಲ್ಲಿ ಮೊಯ್ಲಿ ಬರೆದಿರುವ ಲೇಖನ ಕೃತಿಚೌರ್ಯ ಮಾಡಿ ಬರೆದದ್ದಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದೂ ಪತ್ರಿಕೆಯ ಸಂಪಾದಕೀಯ ಮಂಡಳಿ ತಿಳಿಸಿದೆ. `ವೆಲ್ಫೇರ್ ಟು ಪೇಟರ್ನಲಿಸಮ್' ಎಂಬ ಶಿರೋನಾಮೆಯಲ್ಲಿ ಮೊಯ್ಲಿ ಲೇಖನ ಬರೆದಿದ್ದರು. ಮೇ ನಲ್ಲಿ ಲೇಖಕ ಜಿ.ಸಂಪತ್ ಅವರು ಅದೇ ಲೇಖನ ಬರೆದಿದ್ದರು. ಅದು ಅದೇ ತಿಂಗಳ 26ರಂದು ``ದ ಹಿಂದೂ'' ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಮೊಯ್ಲಿಯವರು ಆ ಲೇಖನದಲ್ಲಿ ಕೊಂಚ ಮಾರ್ಪಾಡು ಮಾಡಿ ಮತ್ತೆ ``ದ ಹಿಂದೂ''ಗೆ ಕಳುಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT